ಧಾರವಾಡ ಮಾಜಿ ಶಾಸಕನ ಪುತ್ರನ ಕೊಲೆಗೆ ಬಿಗ್ ಟ್ವಿಸ್ಟ್, ಅನೈತಿಕ ಸಂಬಂಧಕ್ಕೆ ಜೀವ ಹೋಯ್ತಾ? ಬೆಚ್ಚಿಬೀಳಿಸುವ ಸತ್ಯ ಬಿಚ್ಚಿಟ್ಟ ಎಸ್ಪಿ!
ಧಾರವಾಡದಲ್ಲಿ ನಡೆದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧನ, ತೋಟದ ಮನೆಯಲ್ಲಿ ಕೊಲೆ ಮಾಡಿ ರಾಮಾಪುರ ಬಳಿ ಶವವನ್ನು ಸುಟ್ಟು ಹಾಕಲಾಗಿತ್ತು.ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಧಾರವಾಡ (ಮಾ. 26): ಧಾರವಾಡ ಜಿಲ್ಲೆಯ ರಾಮಾಪುರ ಸಮೀಪದಲ್ಲಿ ನಡೆದಿದ್ದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ಬೆಚ್ಚಿಬಿಳಿಸುವ ಮಾಹಿತಿ ತಿಳಿಸಿದ್ದಾರೆ. ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಪುತ್ರನ ಹತ್ಯೆಗೆ ಸ್ಕೆಚ್ ಹಾಕಿದ್ದು ಯಾಕೆ? ಮೃತ ರಾಜು ಬೋಳಶೆಟ್ಟಿ ಬೈಲಹೊಂಗಲ ತಾಲ್ಲೂಕಿನ ಬಿದರಗಡ್ಡಿ ಗ್ರಾಮದ ಮುನೀರಾ ಎಂಬಾಕೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇತ್ತ ಮುನೀರಾ ಮತ್ತು ಮೃತ್ಯುಂಜಯ ಎಂಬಾತನ ನಡುವೆಯೂ 'ಲವ್ವಿ-ಡವ್ವಿ' ಇತ್ತು ಎನ್ನಲಾಗಿದೆ. ಮುನೀರಾ ಮತ್ತು ರಾಜು ನಡುವಿನ ಸಂಬಂಧವನ್ನು ಮೃತ್ಯುಂಜಯ ಪ್ರಶ್ನಿಸಿದ್ದಲ್ಲದೆ, ಇದೇ ಕಾರಣಕ್ಕೆ ಕಳೆದ ಕೆಲವು ದಿನಗಳ ಹಿಂದೆ ಇಬ್ಬರ ನಡುವೆ ಜಗಳ ನಡೆದಿತ್ತು. ಇದೇ ದ್ವೇಷದಿಂದ ರಾ...