Posts

Showing posts from January, 2026

ಶಿಕಾರಿಪುರ | 1 ಲಕ್ಷ ರೂ. ಲಂಚ ಪಡೆಯುವಾಗ ʻ ಲೋಕಾಯುಕ್ತʼ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Image
  ಶಿವಮೊಗ್ಗ:  ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ (Bribe) ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಚಿಕ್ಕಜಂಬೂರು (Chikkajamburu) ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripur) ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು.  ಇದನ್ನೂ ಓದಿ:  40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ದಾವಣಗೆರೆ: ಪೊಲೀಸರ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರರಿಂದ ಹಲ್ಲೆ; ಮೊಬೈಲ್ ಕಸಿದು ದಾಂಧಲೆ!

Image
  ಸುದ್ದಿ ವಿವರ (News Content): ದಾವಣಗೆರೆ: ನಗರದಲ್ಲಿ ಶನಿವಾರ ಸಂಜೆ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕಾಂಗ್ರೆಸ್‌ನ ಸ್ಥಳೀಯ ಮುಖಂಡ ಹಾಗೂ ದೂಡಾ (DUDA) ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ. ಘಟನೆಯ ವಿವರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಕ್ರಿಯವಾಗಿರುವ ಇಬ್ಬರು ಮುಸ್ಲಿಂ ಮುಖಂಡರ ಪುತ್ರರ ನಡುವೆ ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯಾಹ್ನ ಗಲಾಟೆ ನಡೆದಿತ್ತು. ಈ ಕುರಿತು ವಿಚಾರಣೆಗೆ ಆಯೂಬ್ ಪೈಲ್ವಾನ್ ಅವರ ಮನೆಗೆ ತೆರಳಿದ್ದಾಗ, ಅವರ ಪುತ್ರರಾದ ಹಸೇನ್, ಹುಸೇನ್ ಹಾಗೂ ಸಂಬಂಧಿ ಅಮ್ಮಾನ್ ಎಂಬುವವರು ಪೊಲೀಸರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಪೊಲೀಸರ ವಶಕ್ಕೆ ಆರೋಪಿ: ಹಲ್ಲೆಗೊಳಗಾದವರಲ್ಲಿ ಬಡಾವಣೆ ಠಾಣೆಯ ಇನ್ಸ್‌ಪೆಕ್ಟರ್ ಆರ್. ಗಾಯತ್ರಿ ಹಾಗೂ ಕಾನ್ಸ್‌ಟೇಬಲ್‌ಗಳಾದ ಕೆಂಚಪ್ಪ ಮತ್ತು ಹರೀಶ್ ಸೇರಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ಆಯೂಬ್ ಪೈಲ್ವಾನ್ ಪುತ್ರ ಹಸೇನ್ ಎಂಬಾತನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಬಳಿ ₹400 ಕೋಟಿ ದರೋಡೆ ಪ್ರಕರಣ-ಕಂಟೇನರ್‌ಗಾಗಿ ಹುಡುಕಾಟ : 6 ಜನ ಅರೆಸ್ಟ

Image
ಬೆಳಗಾವಿ :   ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಮಾರ್ಗವಾಗಿ ಸಾಗಿಸಲಾಗುತ್ತಿದ್ದ ₹400 ಕೋಟಿ ನಗದು ಹೊಂದಿದ್ದ ಎರಡು ಕಂಟೇನರ್‌ಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್ಐಟಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.  ಮಚೀಂದ್ರಾ ಮಾದವಿ ಎಂಬಾತನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಆರು ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ. ಈ ಮಧ್ಯೆ, ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ತನಿಖೆಗೆ ಅಗತ್ಯವಿರುವ ಸಂಪೂರ್ಣ ಮಾಹಿತಿ ನಮಗೆ ಇನ್ನೂ ಲಭ್ಯವಾಗಿಲ್ಲ ಎಂದು ತಿಳಿಸಿದರು. ಜ.6ರಂದು ನಮಗೆ ನಾಸಿಕ್‌ ಪೊಲೀಸರಿಂದ ಪತ್ರ ಬಂದಿದೆ. ಬೆಳಗಾವಿಯ ಸಬ್ ಇನ್‌ಸ್ಪೆಕ್ಟರ್‌ ನೇತೃತ್ವದ ತಂಡ ಮಹಾರಾಷ್ಟ್ರದ ನಾಸಿಕ್‌ಗೆ ತೆರಳಿದ್ದು, ತನಿಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಎರಡು ಕಂಟೇನರ್‌ಗಳಲ್ಲಿ ನಗದು ಸಾಗಿಸಲಾಗಿದೆ ಎಂಬ ಮಾಹಿತಿ ಮಾತ್ರ ಲಭ್ಯವಿದ್ದು, ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬ ಕುರಿತು ಮಹಾರಾಷ್ಟ್ರ ಪೊಲೀಸರಿಂದ ಇನ್ನೂ ವಿವರ ಮಾಹಿತಿ ಬಂದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಪತ್ರದಲ್ಲಿ ಹೆಸರುಗಳಷ್ಟೇ ಉಲ್ಲೇಖವಾಗಿದ್ದು, ಸಂಪೂರ್ಣ ವಿವರಗಳನ್ನು ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಕಾಶ ಸಿಕ್ಕಲ್ಲಿ ರಾಜ್ಯ...