ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ


 ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು (Ramadan Festival) ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು (Muslim Leaders) 3 ಸಾವಿರ ಮಠಕ್ಕೆ ತೆರಳಿ, ದೇವರ ದರ್ಶನ ಪಡೆದು ಭಾವೈಕ್ಯತೆ ಮೆರದರು.



ಮಠದ ಪೀಠಾಧಿಪತಿ ಮೂಜಗು ಅನುಪಸ್ಥಿತಿಯಲ್ಲಿ, ಶಿವಮೊಗ್ಗ ಜಿಲ್ಲೆ ಆನಂದಪುರ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಮುಸ್ಲಿಂ ಭಕ್ತರಿಗೆ ಆರ್ಶೀವದಿಸಿ ಹಬ್ಬದ ಶುಭಕೋರಿದರು.

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ದಾವಣಗೆರೆ: ಪೊಲೀಸರ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರರಿಂದ ಹಲ್ಲೆ; ಮೊಬೈಲ್ ಕಸಿದು ದಾಂಧಲೆ!

ಲೋಕಾಯುಕ್ತ ದಾಳಿ: ಬಿಡಿಎ ಅರಣ್ಯಾಧಿಕಾರಿ ಮನೆಯಲ್ಲಿ ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!