ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ: ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್!


 ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ.

ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆಯುತ್ತಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ‌. ಸತ್ಯನಾರಾಯಣ ಫೋನ್ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ

ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದಾರೆ.

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ದಾವಣಗೆರೆ: ಪೊಲೀಸರ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರರಿಂದ ಹಲ್ಲೆ; ಮೊಬೈಲ್ ಕಸಿದು ದಾಂಧಲೆ!

ಲೋಕಾಯುಕ್ತ ದಾಳಿ: ಬಿಡಿಎ ಅರಣ್ಯಾಧಿಕಾರಿ ಮನೆಯಲ್ಲಿ ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!