ದಾವಣಗೆರೆ | ಯಾರಿಗೆ ಟಿಕೆಟ್ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ
ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ (Davangere South Byelection) ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ ಎಂದು ಐವರು ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಬಿಜೆಪಿಯ (BJP) ಎರಡು ಬಣದ ನಾಯಕರು ಒಂದಾಗಿದ್ದಾರೆ. ಐವರು ಆಕಾಂಕ್ಷಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಅಜಯ್ ಕುಮಾರ್, ಯಶವಂತರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ ಮತ್ತು ದೇವರಮನೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಭಾಗಿಯಯಾಗಿದ್ದರು. ಈ ವೇಳೆ ಯಾರಿಗೆ ಟಿಕೆಟ್ ಕೊಟ್ಟರು ಬಿಜೆಪಿ ಗೆಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ

Comments
Post a Comment