ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ. ಏ.9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ

 

ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ. ಏ.9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ.


ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.


ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮತದಾನದ ಪ್ರಕ್ರಿಯೆ ಮುಗಿಯುವವರೆಗೆ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ನಡೆಸುವುದನ್ನು ಅಥವಾ ಅದರ ಫಲಿತಾಂಶಗಳ ಪ್ರಕಟಿಸುವುದನ್ನು ಭಾರತೀಯ ಚುನಾವಣಾ ಆಯೋಗವು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಈ ಆದೇಶವನ್ನು ಮಾರ್ಚ್ 27ರಂದು ಹೊರಡಿಸಿದ್ದು, ಶನಿವಾರ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. ಈ ಸಂಬಂಧದ ಅಧಿಸೂಚನೆ ರಾಜ್ಯ ಗಜೆಟ್‌ನಲ್ಲಿ ಪ್ರಕಟಗೊಂಡಿದೆ.

ಚುನಾವಣಾ ಆಯೋಗದ ಸೂಚನೆಯ ಪ್ರಕಾರ, ದೇಶದ ಆರು ರಾಜ್ಯಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಿಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳಿಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 126A ಪ್ರಕಾರ, ಚುನಾವಣಾ ಅವಧಿಯಲ್ಲಿ ಯಾವುದೇ ವ್ಯಕ್ತಿ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಅದರ ಫಲಿತಾಂಶವನ್ನು ಮುದ್ರಣ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ ಅಥವಾ ಇತರೆ ಯಾವುದೇ ರೂಪದಲ್ಲಿ ಪ್ರಕಟಿಸುವುದು ಕಾನೂನುಬಾಹಿರವಾಗಿದೆ.

ಈ ಆದೇಶದಂತೆ, ಏಪ್ರಿಲ್ 9 ಬೆಳಿಗ್ಗೆ 7 ಗಂಟೆಯಿಂದ ಏಪ್ರಿಲ್ 29 ಸಂಜೆ 6.30ರವರೆಗೆ ಯಾವುದೇ ರೀತಿಯ ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.


Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ದಾವಣಗೆರೆ: ಪೊಲೀಸರ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರರಿಂದ ಹಲ್ಲೆ; ಮೊಬೈಲ್ ಕಸಿದು ದಾಂಧಲೆ!

ಲೋಕಾಯುಕ್ತ ದಾಳಿ: ಬಿಡಿಎ ಅರಣ್ಯಾಧಿಕಾರಿ ಮನೆಯಲ್ಲಿ ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!