Posts

Showing posts from April, 2026

: ಎಸ್‌ಎಸ್‌ಎಲ್‌ಸಿ ಪರೀಕ್ಷೆ: ದಾವಣಗೆರೆ ವಿದ್ಯಾರ್ಥಿ ಶಶಾಂಕ್ ಎಂ. ಗೆ ಭರ್ಜರಿ ಯಶಸ್ಸು, 88.16% ಅಂಕ ಗಳಿಕೆ!

Image
 ದಾವಣಗೆರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಪ್ರಕಟಿಸಿದ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾವಣಗೆರೆಯ ವಿದ್ಯಾರ್ಥಿ ಶಶಾಂಕ್ ಎಂ. ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಉತ್ತರ ತಾಲ್ಲೂಕಿನ ಎಸ್‌.ಎಂ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾದ ಇವರು, ಒಟ್ಟು 625 ಅಂಕಗಳಿಗೆ 551 ಅಂಕಗಳನ್ನು ಪಡೆಯುವ ಮೂಲಕ 88.16% ಫಲಿತಾಂಶ ದಾಖಲಿಸಿದ್ದಾರೆ. ಮಗನ ಈ ಸಾಧನೆಗೆ ಪೋಷಕರಾದ  ಲಕ್ಷ್ಮಿ ಗೌತಮಿ ಮತ್ತು ದೇವಿರಮ್ಮ ಸುಭದ್ರಮ್ಮ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಶಶಾಂಕ್ ಅವರ ಈ ಯಶಸ್ಸಿಗೆ ಶಾಲೆಯ ಶಿಕ್ಷಕರು ಹಾಗೂ ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್‌ವರ್ಕ್ ಅಭಿನಂದನೆ ಸಲ್ಲಿಸಿದೆ. ಅಣ್ಣನಿಗೆ ಶುಭಾಶಯ ಕೋರುತ್ತಿರುವ ತಂಗಿ ಗೌತಮಿ ವರದಿ: ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್‌ವರ್ಕ್, ದಾವಣಗೆರೆ.

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಹಡಗಿನ ಮೇಲೆ ಇರಾನ್ ಗುಂಡಿನ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ!

Image
ಹಾರ್ಮುಜ್ ಜಲಸಂಧಿ ಇಂದು ಬೆಳಗ್ಗೆ ಅಮೆರಿಕಾ ಕದನ ವಿರಾಮ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಹಾರ್ಮುಜ್ ಮೂಲಕ ಸಾಗುತ್ತಿದ್ದ ಕಂಟೇನರ್ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ. ಟೆಹ್ರಾನ್: ಬ್ರಿಟಿಷ್ ಮಿಲಿಟರಿಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ಬುಧವಾರ ಒಟ್ಟು ಎರಡು ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಲಾದ್ದು, ಇದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಲ್ಲದೆ ಸಂಘರ್ಷವನ್ನು ಕೊನೆಗೊಳಿಸಲು ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆಗಾಗಿ ಅಮೆರಿಕ ಮತ್ತು ಇರಾನ್ ಅನ್ನು ಒಟ್ಟುಗೂಡಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ. ಇಂದು ಬೆಳಗ್ಗೆ ಅಮೆರಿಕಾ ಕದನ ವಿರಾಮ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಹಾರ್ಮುಜ್ ಮೂಲಕ ಸಾಗುತ್ತಿದ್ದ ಕಂಟೇನರ್ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ. ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(IRGC) ಪಡೆ ಈ ದಾಳಿ ನಡೆಸಿದ್ದು, ಹಡಗಿನ ಹತ್ತಿರ ಬಂದು ಗುಂಡಿನ ದಾಳಿ ನಡೆಸಿದ್ದು, ಹಡಗಿನ ನಿಯಂತ್ರಣ ಕೊಠಡಿಗೆ(ಕಂಟ್ರೋಲ್ ರೂಂ) ದೊಡ್ಡ ಮಟ್ಟದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಆದರೆ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ.

ತಂದೆ ಹ್ಯಾರಿಸ್ ಗೂ ED ದಾಳಿಗೂ ಯಾವುದೇ ಸಂಬಂಧವಿಲ್ಲ; ನಾನು ಒಬ್ಬ ಒಳ್ಳೆಯ ಮಗನಾಗಲು ಸಾಧ್ಯವಾಗಲೇ ಇಲ್ಲ: ಅಳಲು ತೋಡಿಕೊಂಡ ನಲಪಾಡ್

Image
 ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ದಾಳಿ ಬೆನ್ನಲ್ಲೇ ಮಾತನಾಡಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಇಡಿ ದಾಳಿಗೂ ನಮ್ಮ ತಂದೆ ಹಾರಿಸ್ ಅವರಿಗೂ ಯಾವುದೇ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಡಿ ದಾಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಲಪಾಡ್, ಈ ದಾಳಿಯು ತಮ್ಮ ಮತ್ತು ತಮ್ಮ ಸಹೋದರ ಉಮರ್ ಹ್ಯಾರಿಸ್ ನಲಪಾಡ್ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎಂದಿದ್ದಾರೆ. 2021 ರಲ್ಲಿ ಇಡಿಯಲ್ಲಿ ಇಸಿಐಆರ್ (ECIR) ದಾಖಲಾಗಿತ್ತು. ಈಗ 2026ರಲ್ಲಿ ಇಡಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಅಳಿ ನಡೆಸಿದ್ದಾರೆ. ಯಾರಾದರೂ ಕ್ರೈಮ್ ಮಾಡಿದ್ದರೆ ಆರು ವರ್ಷಗಳ ಕಾಲ ಸಾಕ್ಷ್ಯಗಳನ್ನು ಇಟ್ಟುಕೊಂಡು ಮನೆ ಶೋಧ ಮಾಡಲು ಕಾಯುತ್ತಾರಾ? ಎಂದು ಪ್ರಶ್ನಿಸಿದ್ದಾರೆ. ತಮ್ಮ ತಂದೆ ಸಚಿವ ಸ್ಥಾನ ಪಡೆಯುವುದನ್ನು ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ. ಇಡಿ ಅಧಿಕಾರಿಗಳು ನಮ್ಮ ನಿವಾಸಕ್ಕೆ ಬಂದಿದ್ದು, ನಾವು ಹಾರಿಸ್ ಅವರ ಮಕ್ಕಳು ಮತ್ತು ಆ ಮನೆಯಲ್ಲಿ ವಾಸಿಸುತ್ತಿರುವುದರಿಂದ ಮಾತ್ರ. ಈ ಪ್ರಕರಣಕ್ಕೂ ಮತ್ತು ನಮ್ಮ ತಂದೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ತಮ್ಮ ತಂದೆಗೆ ಮಂತ್ರಿ ಸ್ಥಾನ ಸಿಗದಂತೆ ತಡೆಯಲು ಮತ್ತು ಅವರ ಮೇಲೆ ಗೂಬೆ ಕೂರಿಸುವ ಉದ್ದೇಶದಿಂದ ನಡೆದಿದೆ ಎಂದು ನಲಪಾಡ್ ಆರೋಪಿಸಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರದ ಬಿಜೆಪಿಯವರು ತಮ್ಮ ಕುಟುಂಬವನ್ನು ಗುರಿಯಾಗ...

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Image
 ಹೈದರಾಬಾದ್: ಆಪರೇಷನ್ ಆಕ್ಟೋಪಸ್ 2.0  ಹೆಸರಿನಲ್ಲಿ ಹೈದರಾಬಾದ್ ಪೊಲೀಸರು  ಕಾರ್ಯಾಚರಣೆ ನಡೆಸಿ ಬೃಹತ್ ಸೈಬರ್‌ ವಂಚನೆಯ  ಜಾಲವೊಂದನ್ನು ಬಯಲಿಗೆಳೆದಿದ್ದಾರೆ. ಒಂಬತ್ತು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ 32 ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ 52 ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಹಣವನ್ನು ವರ್ಗಾಯಿಸಲು ಸೈಬರ್ ಅಪರಾಧಿಗಳಿಗೆ ನಕಲಿ (ಮ್ಯೂಲ್) ಖಾತೆಗಳನ್ನು ತೆರೆಯಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತಿದ್ದ ಬ್ಯಾಂಕ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್ ಆಫ್ ಬರೋಡಾ, ಬಂಧನ್ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ ಸೇರಿದಂತೆ ಹಲವು ಬ್ಯಾಂಕುಗಳ ವ್ಯವಸ್ಥಾಪಕರು, ಗುಮಾಸ್ತರು ಮತ್ತು ಕೆವೈಸಿ ಸಿಬ್ಬಂದಿ ಸೇರಿದ್ದಾರೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ತೆಲಂಗಾಣ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಪೊಲೀಸ್ ತಂಡಗಳು ಒಂದು ವಾರ ಈ ಕಾರ್ಯಾಚರಣೆ ನಡೆಸಿವೆ. ದಾಳಿಯ ಸಮಯದಲ್ಲಿ, ಪೊಲೀಸರು 26 ಮೊಬೈಲ್ ಫೋನ್‌ಗಳು, 14 ಚೆಕ್ ಪುಸ್ತಕಗಳು, 21 ನಕಲಿ ಕಂಪನಿಯ ಪತ್ರಗಳು ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಖಾತೆಗಳನ್ನು ರಚಿಸಲು ಮತ್ತು ನಿರ್ವಹಿಸಲು ಈ ದಾಖಲೆಗಳನ್ನು ಬಳಸಲಾಗಿದೆ. ಇಂತಹ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಯಾರಾದರೂ ಸರಿ, ಅವರ ಸ್ಥಾನ ಏನೇ ಇದ್ದರೂ ಸಹ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ...

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

Image
 ದಾವಣಗೆರೆ/ಜಗಳೂರು: ತಂದೆ-ತಾಯಿಯ ಆಸೆಯನ್ನು ಈಡೇರಿಸುವ ಮಗನಿಗಿಂತ ದೊಡ್ಡ ಆಸ್ತಿ ಮತ್ತೊಂದಿಲ್ಲ ಎಂಬುದಕ್ಕೆ ಇಲ್ಲೊಂದು ಉತ್ತಮ ಉದಾಹರಣೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಕಲ್ಲೇಶ್ ಕೆ.ಪಿ. ಎಂಬುವವರು ತಮ್ಮ ತಂದೆ-ತಾಯಿಯ ದೀರ್ಘಕಾಲದ ಕನಸಿನ ಮನೆಯನ್ನು ನಿರ್ಮಿಸಿ ಮಗನಾಗಿ ಕರ್ತವ್ಯ ಮೆರೆದಿದ್ದಾರೆ. 13 ವರ್ಷಗಳ ಕಠಿಣ ಶ್ರಮ: ಕಲ್ಲೇಶ್ ಕೆ.ಪಿ. ಅವರು ಕಳೆದ 13 ವರ್ಷಗಳಿಂದ ಬೆಂಗಳೂರಿನಲ್ಲಿ ಕಷ್ಟಪಟ್ಟು ದುಡಿದು, ಪ್ರತಿಯೊಂದು ರೂಪಾಯಿಯನ್ನು ಕೂಡಿಟ್ಟು ಇಂದು ಈ ಸುಂದರವಾದ **'ಶ್ರೀ ಬಸವೇಶ್ವರ ನಿಲಯ'**ವನ್ನು ನಿರ್ಮಿಸಿದ್ದಾರೆ. ಸುಮಾರು ಒಂದು ದಶಕಕ್ಕೂ ಹೆಚ್ಚು ಕಾಲ ಪಟ್ಟ ಶ್ರಮದ ಫಲವಾಗಿ ಇಂದು ಈ ಸುಂದರ ಮನೆ ತಲೆಯೆತ್ತಿದೆ. ಮಗನ ಸಾಧನೆಗೆ ತಂದೆ-ತಾಯಿ ಹರ್ಷ: ತಮ್ಮ ಮಗ ಬೆಂಗಳೂರಿನಲ್ಲಿ ದುಡಿದು ತಮಗಾಗಿ ಇಷ್ಟು ಸುಂದರವಾದ ಮನೆಯನ್ನು ಕಟ್ಟಿಸಿಕೊಟ್ಟಿರುವುದಕ್ಕೆ ಪೋಷಕರು ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ. ಈ ಗೃಹಪ್ರವೇಶ ಸಮಾರಂಭವು ದಿನಾಂಕ 20-04-2026 ರಂದು ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ಧೂರಿಯಾಗಿ ನೆರವೇರಿದೆ. ಬಂಧು-ಮಿತ್ರರು ಹಾಗೂ ಗ್ರಾಮಸ್ಥರು ಸಮಾರಂಭದಲ್ಲಿ ಪಾಲ್ಗೊಂಡು ಕಲ್ಲೇಶ್ ಅವರ ಸಾಧನೆಯನ್ನು ಶ್ಲಾಘಿಸಿ, ನೂತನ ದಂಪತಿಗಳಿಗೆ ಹಾಗೂ ಕುಟುಂಬದವರಿಗೆ ಶುಭ ಹಾರೈಸಿದರು. ಚದರಗೊಳ್ಳ ಸಿ ಜಿ ವಸಂತ್ ಕುಮಾರ್ ವರದಿ: ಟಿವಿ ನ್...

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಸ್ಟಡಿಯಿಂದ ಎಸ್ಕೇಪ್ ಆದ ಆರೋಪಿ!

Image
ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್ ಬಳ್ಳಾರಿ, ಏಪ್ರಿಲ್ 18: ಜಿಲ್ಲೆಯಲ್ಲಿ ( ಬಳ್ಳಾರಿ)ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ 16.17 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿದ ಆರೋಪ ಇದೆ. ಗುತ್ತಿಗೆ ನೌಕರನಾಗಿದ್ದ ಸಂತೋಷ್, ಅಧಿಕಾರಿಗಳ ನಕಲಿ ಸಹಿಗಳನ್ನು ಬಳಸಿ ಚೆಕ್‌ಗಳ ಮೂಲಕ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಏಳು ಮಂದಿ ಭಾಗಿಯಾಗಿರುವ ಶಂಕೆ ಇದೆ. ಸಿಬಿಐಗೆ ಒಪ್ಪಿಸುವ ಮುನ್ನವೇ ಪರಾರಿ 2022ರಿಂದ 2026ರವರೆಗೆ ಹಂತ ಹಂತವಾಗಿ ಹಣ ಲೂಟಿ ಮಾಡಲಾಗಿದ್ದು, 2026 ಮಾರ್ಚ್ 3ರಂದು ಪ್ರಕರಣ ಬಹಿರಂಗಗೊಂಡಿತ್ತು. ಬಳಿಕ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಂತೋಷ್ ಪರಾರಿಯಾಗಿದ್ದ. ನಿರಂತರ ಹುಡುಕಾಟದ ಬಳಿಕ ಏಪ್ರಿಲ್ 15ರಂದು ಪೊಲೀ...

ಯೋಗೇಶ್ ಗೌಡ ಕೊಂದ 16 ಮಂದಿಗೆ ಜೀವಾವಧಿ, ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು? ಜೀವಾವಧಿ ಶಿಕ್ಷೆ ಎಂದರೇನು?

Image
 ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು 10 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಪು ಹೊರಬಿದ್ದಿದ್ದು, ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ 7 ವರ್ಷಗಳ ಜೈಲು ಶಿಕ್ಷೆಯಾಗಿದೆ. ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಜೊತೆಗೆ ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷದಂತೆ ಒಟ್ಟು ₹16 ಲಕ್ಷ ದಂಡ ವಿಧಿಸಲಾಗಿದ್ದು, ಈ ಮೊತ್ತವನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಅವರ ಸಹೋದರ ಗುರುನಾಥ್ ಗೌಡ ಅವರಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನಕೇಶವ ಟಿಂಗರೀಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆ ಎಂದರೆ ಏನು? ಜೀವಾವಧಿ ಶಿಕ್ಷೆ ಎಂದರೆ ಅಪರಾಧಿಯು ತನ್ನ ನೈಸರ್ಗಿಕ ಜೀವಿತಾವಧಿಯ ಅಂತ್ಯದವರೆಗೆ ಜೈಲಿನಲ್ಲಿ ಇರಬೇಕಾದ ಶಿಕ್ಷೆಯ...

ಶ್ರೀ ಗುರು ಮಾರಿ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನ ದಾಸೋಹ

Image
 ದಾವಣಗೆರೆ: ಇಲ್ಲಿನ ಶ್ರೀ ಗುರು ಮಾರಿ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ಅಮಾವಾಸ್ಯೆಯ ಅಂಗವಾಗಿ ಭಕ್ತಾದಿಗಳಿಗೆ ವಿಶೇಷ ಅನ್ನ ಸಂತರ್ಪಣೆ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಮಾವಾಸ್ಯೆಯ ಪ್ರಯುಕ್ತ ದೇವಸ್ಥಾನಕ್ಕೆ ಆಗಮಿಸಿದ್ದ ಸುಮಾರು 500 ರಿಂದ 1000ಕ್ಕೂ ಹೆಚ್ಚು ಭಕ್ತಾದಿಗಳಿಗೆ ಅಂಬಳಿ ಗ್ರಾಮದ ನಿವೃತ್ತ ಮುಖ್ಯ ಗುರುಗಳಾದ ಶ್ರೀ ಬಿ. ಚಂದ್ರಪ್ಪ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಚಂದ್ರಮತಿ ಮತ್ತು ಅವರ ಕುಟುಂಬಸ್ಥರು ಅನ್ನ ದಾಸೋಹ ಸೇವೆಯನ್ನು ಮಾಡಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಸಕಲ ವ್ಯವಸ್ಥೆಗಳೊಂದಿಗೆ ಅನ್ನ ಪ್ರಸಾದವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ಶಿವಕುಮಾರ್ ಸರ್ ಅವರು ದೇವರಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು. ಅಮಾವಾಸ್ಯೆಯ ಶುಭ ದಿನದಂದು ನಡೆದ ಈ ಅನ್ನ ದಾಸೋಹ ಸೇವೆಯು ಭಕ್ತರ ಮೆಚ್ಚುಗೆಗೆ ಪಾತ್ರವಾಯಿತು. ದೇವಸ್ಥಾನದ ಸಮಿತಿ ಹಾಗೂ ಸ್ಥಳೀಯರು ಈ ಭಕ್ತಿಪೂರ್ವಕ ಸೇವೆಗೆ ಸಾಕ್ಷಿಯಾದರು. ಚದರಗೊಳ್ಳ ಸಿ ಜಿ ವಸಂತ್ ಕುಮಾರ್ ವರದಿ: ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್‌ವರ್ಕ್, ಕೊಟ್ಟೂರು.

ಹರಿಹರ ಪಂಚಮಸಾಲಿ ಪೀಠದಲ್ಲಿ ಅವ್ಯವಹಾರ: ವಚನಾನಂದ ಸ್ವಾಮೀಜಿ ಉಚ್ಚಾಟನೆ; ಟ್ರಸ್ಟಿಗಳಿಂದ ದಿಢೀರ್ ನಿರ್ಧಾರ

Image
 ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಲು ಟ್ರಸ್ಟಿಗಳು ನಿರ್ಣಯ ಕೈಗೊಂಡಿದ್ದಾರೆ. ಟ್ರಸ್ಟಿಗಳ ಈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ಧರ್ಮದರ್ಶಿಗಳಿಗೆ ಚಪ್ಪಲಿ ಪ್ರದರ್ಶಿಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ದಾವಣಗೆರೆ: ಹರಿಹರದ ಪಂಚಮಸಾಲಿ ಪೀಠದಲ್ಲಿ ಅವ್ಯವಹಾರ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಜೋರಾಗಿದ್ದು, ಪೀಠಾಧಿಪತಿ ಸ್ಥಾನದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲು ಟ್ರಸ್ಟಿಗಳು ನಿರ್ಧಾರ ಕೈಗೊಂಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ನಡೆಯುತ್ತಿತ್ತು. ಸೋಮವಾರ ಈ ಬಗ್ಗೆ ಟ್ರಸ್ಟಿಗಳು ಸಭೆ ನಡೆಸಿದ್ದು, 15 ಟ್ರಸ್ಟಿಗಳ ಪೈಕಿ 13 ಮಂದಿ ಭಾಗವಹಿಸಿ ವಚನಾನಂದ ಶ್ರೀಗಳನ್ನು ಉಚ್ಚಾಟನೆ ಮಾಡುವ ನಿರ್ಣಯ ಕೈಗೊಂಡಿದ್ದಾರೆ. ಈ ಬಗ್ಗೆ ಟ್ರಸ್ಟಿಯಾದ ಬಸವರಾಜ್ ದಿಂಡೂರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಟ್ರಸ್ಟ್‌ನ ಈ ನಿರ್ಧಾರ ಖಂಡಿಸಿರುವ ಮಠದ ಕೆಲ ಭಕ್ತರು ಧರ್ಮದರ್ಶಿಗಳಿಗೆ ಚಪ್ಪಲಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಈ ಬಗ್ಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಭಕ್ತರು ಹಾಗೂ ದೇವರ ನಿರ್ಧಾರಕ್ಕೆ ಬಿಟ್ಟಿದ್ದೇವೆ ಎಂದಿದ್ದಾರೆ. ಮೂರು ಕೋಟಿ ಅವ್ಯವಹಾರ ಆರೋಪ ಹರಿಹರದ ಪಂಚಮಸಾಲಿ ಪೀಠದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರ ನೀಡಿದ ಅನುದಾನದಲ್ಲಿ 3 ಕೋಟಿಗೂ ಅಧಿಕ ಅವ್ಯವಹಾರ ನಡೆದಿದ್ದು, ಈ ಕುರಿತು...

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Image
 ವಿಜಯಪುರ: ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ. ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ದಾವಣಗೆರೆ: ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

Image
 ದಾವಣಗೆರೆಯ ಜಗಳೂರಿನಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ: ದಾವಣಗೆರೆಯ ಜಗಳೂರಿನಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಷ್ಟೂರು-ಕಡಬನಕಟ್ಟೆ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು 45 ವರ್ಷದ ರಘುನಾಥ್ ಮೃತಪಟ್ಟಿದ್ದಾರೆ. ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್ ಇ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಘುನಾಥ್ ಚಿತ್ರದುರ್ಗದಿಂದ ಜಗಳೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿತ್ತು. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜನ ಆಶಾ ಸೌತ್ ನಿಧಿ ಲಿಮಿಟೆಡ್ ಕಂಪನಿಯಲ್ಲಿ ಸಾಧನೆ: ಹೆಚ್.ಎಂ. ಸವಿತಾ ದಂಪತಿಗೆ ಅಭಿನಂದನೆ

Image
 ಜನ ಆಶಾ ಸೌತ್ ನಿಧಿ ಲಿಮಿಟೆಡ್ ಕಂಪನಿಯಲ್ಲಿ ಸಾಧನೆ: ಹೆಚ್.ಎಂ. ಸವಿತಾ ದಂಪತಿಗೆ ಅಭಿನಂದನೆ ಹಗರಿಬೊಮ್ಮನಹಳ್ಳಿ: ಇಲ್ಲಿನ ಜನ ಆಶಾ ಸೌತ್ ನಿಧಿ ಲಿಮಿಟೆಡ್ (JANAASHA SOUTH NIDHI LIMITED) ಕಂಪನಿಯ ಹಗರಿಬೊಮ್ಮನಹಳ್ಳಿ ಶಾಖೆಯಲ್ಲಿ ಕಳೆದ ಆರು ತಿಂಗಳಿನಿಂದ ಅತ್ಯಂತ ಕಷ್ಟಪಟ್ಟು ಕೆಲಸ ಮಾಡಿ, ಪಿಗ್ಮಿ ಕಲೆಕ್ಷನ್‌ನಲ್ಲಿ (Pigmy Collection) ಗಮನಾರ್ಹ ಸಾಧನೆ ಮಾಡಿದ ಹೆಚ್.ಎಂ. ಸವಿತಾ ಮತ್ತು ಅವರ ಪತಿ ಹೆಚ್.ಎಂ. ಶಿವಕುಮಾರ್ ಅವರಿಗೆ ಕಂಪನಿಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ. ಆರು ತಿಂಗಳ ಅವಿರತ ಶ್ರಮ: ಕಂಪನಿಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸವಿತಾ ಮತ್ತು ಶಿವಕುಮಾರ್ ದಂಪತಿಗಳು, ಕಳೆದ ಆರು ತಿಂಗಳಿನಿಂದ ಪಿಗ್ಮಿ ಸಂಗ್ರಹಣೆಯಲ್ಲಿ ಸತತವಾಗಿ ಕಾರ್ಯನಿರ್ವಹಿಸಿ ಕಂಪನಿಯ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಪ್ರಾಮಾಣಿಕ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಹಗರಿಬೊಮ್ಮನಹಳ್ಳಿ ಶಾಖೆಯ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅಭಿನಂದನೆ ಸಲ್ಲಿಕೆ: ಜನ ಆಶಾ ಸೌತ್ ನಿಧಿ ಲಿಮಿಟೆಡ್ ಕಂಪನಿಯ ಸೀನಿಯರ್ ಡೆವಲಪ್‌ಮೆಂಟ್ ಆಫೀಸರ್ (Senior Development Officer) ಅವರು ಈ ದಂಪತಿಗಳ ಸಾಧನೆಯನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ. ಗ್ರಾಹಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಈ ದಂಪತಿಗಳು ಹಣಕಾಸಿನ ವ್ಯವಹಾರದಲ್ಲಿ ಕಂಪನಿಯ ವ...

ವಿಜಯನಗರ ಜಿಲ್ಲೆಯ ವಲ್ಲಬಾಪುರ ಗ್ರಾಮದಲ್ಲಿ ಶಿಕ್ಷಕರಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭ

Image
 ವಿಜಯನಗರ ಜಿಲ್ಲೆಯ ವಲ್ಲಬಾಪುರದಲ್ಲಿ ಶಿಕ್ಷಕರಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭ ಕೊಟ್ಟೂರು (ವಿಜಯನಗರ): ವಿಜಯನಗರ ಜಿಲ್ಲೆಯ ವಲ್ಲಬಾಪುರ ಗ್ರಾಮದಲ್ಲಿ ಇಂದು ವರ್ಗಾವಣೆಗೊಂಡ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಅತ್ಯಂತ ಗೌರವಪೂರ್ವಕವಾಗಿ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಗ್ರಾಮದ ಶಾಲೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ ಶಿಕ್ಷಕರನ್ನು ಗ್ರಾಮಸ್ಥರು ಶ್ಲಾಘಿಸಿದರು. ಸನ್ಮಾನಿತರ ವಿವರ: ಈ ಸಂದರ್ಭದಲ್ಲಿ ಲಕ್ಷ್ಮಿ ಮ್ಯಾಡಂ, ಜ್ಯೋತಿ ಮ್ಯಾಡಂ, ಭಾರ್ತಿ ಮ್ಯಾಡಂ, ಕವಿತಾ ಮ್ಯಾಡಂ, ಮಮತಾ ಮ್ಯಾಡಂ, ಪ್ರಶಾಂತ್ ಸರ್, ಜೀವರತ್ನ ಮ್ಯಾಡಂ, ಸಂಗೀತ ಮ್ಯಾಡಂ ಮತ್ತು ಗೀತಾ ಮ್ಯಾಡಂ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಭಾವಪೂರ್ಣವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಗಣ್ಯರು: ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಟ್ರಪ್ಪ ಸರ್ ಮತ್ತು ಬಿಷ್ಟಪ್ಪ ಸರ್ ಪಾಲ್ಗೊಂಡು ಸನ್ಮಾನಿತ ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು. ಗ್ರಾಮದ ಹಿರಿಯರು, ಪೋಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ನೆಚ್ಚಿನ ಶಿಕ್ಷಕರಿಗೆ ಶುಭ ಹಾರೈಸಿದರು. ಬೀಳ್ಕೊಡುಗೆ ಪಡೆದ ಶಿಕ್ಷಕರು ಮಾತನಾಡಿ, ವಲ್ಲಬಾಪುರ ಗ್ರಾಮದ ಜನರು ನೀಡಿದ ಸಹಕಾರ ಮತ್ತು ಪ್ರೀತಿ ಮರೆಯಲಾಗದ್ದು ಎಂದು ಭಾವುಕರಾಗಿ ನುಡಿದರು. ಚದರಗೊಳ್ಳ ಸಿ ಜಿ ವಸಂತ್ ಕುಮಾರ್ ವರದಿ: ...

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Image
 ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕೋಗಲಿ ನಾಡ ಕಾರ್ಯಾಲಯದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು: ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರೇಖಾ, ಕಂದಾಯ ನಿರೀಕ್ಷಕರು (RI) ಹಾಲಸ್ವಾಮಿ, ಗ್ರಾಮ ಆಡಳಿತಾಧಿಕಾರಿಗಳಾದ (VA) ಕೊಟ್ಟಮ್ಮ, ಶಾರದಾ, ಮಂಗಳ ಹಾಗೂ ಗ್ರಾಮ ಸಹಾಯಕರಾದ ನವೀನ, ಮಲ್ಲಪ್ಪ, ಬಸವರಾಜ ಅವರು ಉಪಸ್ಥಿತರಿದ್ದರು. ಗ್ರಾಮಸ್ಥರ ಭಾಗಿ: ಸರ್ಕಾರಿ ಅಧಿಕಾರಿಗಳ ಜೊತೆಗೆ ಗ್ರಾಮದ ಮುಖಂಡರಾದ ಹಾರಳ್ ನೀಲಪ್ಪ, ಕಲ್ಯಾಣ ಸ್ವಾಮಿ, ಮರುಳಸಿದ್ಧಯ್ಯ, ಹೋಟೆಲ್ ಸಂತೋಷ್, ಪ್ರಕಾಶ್ ಸೇರಿದಂತೆ ಅನೇಕ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ವೇಳೆ ಮಾತನಾಡಿದ ಅಧಿಕಾರಿಗಳು, ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬರೂ ಅವರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಚದರಗೊಳ್ಳ ಸಿ ಜಿ ವಸಂತ್ ಕುಮಾರ್ ವರದಿ: ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್‌ವರ್ಕ್, ಕೊಟ್ಟೂರು.

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Image
 ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿವೆ. ದಾಳಿಯಲ್ಲಿ ಬಾಬು ಬಿ.ಎನ್ ಗೆ ಸಂಬಂಧಿಸಿದ ವಸತಿ ಮನೆಗಳು, ವಾಣಿಜ್ಯ ಸಂಸ್ಥೆಗಳು, ಫ್ಲಾಟ್‌ಗಳು ಮತ್ತು ಕಚೇರಿಗಳು ಸೇರಿವೆ. ಶೋಧದ ಸಮಯದಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ ಸುಮಾರು 3.37 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ ಎಂದು ಹೇಳಲಾಗುತ್ತದೆ. ಬೆಂಗಳೂರಿನ ನಿವಾಸದಲ್ಲಿ, ಚಿನ್ನ ಮತ್ತು ಬೆಳ್ಳಿ ಆಭರ...

ಪೊಲೀಸ್ ಅಧಿಕಾರಿಯ 80 ಕೋಟಿ ಬೇನಾಮಿ ಆಸ್ತಿಗೆ ಮನೆಗೆಲಸದವಳೇ ಬಾಸ್: ರೀಲ್ಸ್ ನೋಡಿ ಬೆಚ್ಚಿಬಿದ್ದ ತನಿಖಾ ತಂಡ!

Image
 ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡಿರುವ ಕಿಶನ್‌ಗಂಜ್ ಎಸ್‌ಡಿಪಿಒ ಗೌತಮ್ ಕುಮಾರ್ ಅವರ ಮನೆಯ ಕೆಲಸದಾಕೆ ಪಾರೋ, ಅವರ ಬೇನಾಮಿ ಆಸ್ತಿಯನ್ನು ನಿರ್ವಹಿಸುತ್ತಿದ್ದಳು. ಸೋಷಿಯಲ್ ಮೀಡಿಯಾ ರೀಲ್ಸ್‌ನಿಂದ ಆಕೆಯ ಅದ್ದೂರಿ ಜೀವನ ಬಯಲಾಗಿದೆ. ಬಿಹಾರ (ಏ.10): ಬಿಹಾರದ ಕಿಶನ್‌ಗಂಜ್‌ನ ಎಸ್‌ಡಿಪಿಒ (ಸಬ್ ಡಿವಿಜನಲ್ ಪೊಲೀಸ್ ಆಫೀಸರ್) ಗೌತಮ್ ಕುಮಾರ್ ಎಂಬ ಭ್ರಷ್ಟ ಅಧಿಕಾರಿಯ ಕಥೆ ಈಗ ಸಿನಿಮಾದ ಟ್ವಿಸ್ಟ್‌ಗಳನ್ನೂ ಮೀರಿಸುವಂತಿದೆ. ಕೋಟಿ ಕೋಟಿ ಭ್ರಷ್ಟಾಚಾರದ ಆರೋಪದ ಮೇಲೆ ಇವರು ಅಮಾನತುಗೊಂಡ ಬೆನ್ನಲ್ಲೇ, ಇವರ ಮನೆಯ ಕೆಲಸದಾಕೆ ಪಾರೋ ಎಂಬಾಕೆಯ ಸುತ್ತ ಈ ಪ್ರಕರಣದ ರಹಸ್ಯಗಳು ಗಿರಕಿ ಹೊಡೆಯುತ್ತಿವೆ. ಪ್ರಕರಣದ ಆರಂಭದಲ್ಲಿ ತನಿಖಾ ತಂಡಕ್ಕೆ ಪಾರೋ ಎಂಬಾಕೆಯ ಮೇಲೆ ಕಿಂಚಿತ್ತೂ ಅನುಮಾನವಿರಲಿಲ್ಲ. ಆದರೆ, ಸೋಶಿಯಲ್‌ ಮೀಡಿಯಾದಲ್ಲಿ ಈಕೆಯ ವೈರಲ್ ರೀಲ್ಸ್‌ಗಳು ತನಿಖೆಯ ದಿಕ್ಕನ್ನೇ ಬುಡಮೇಲು ಮಾಡಿದವು. ಕೆಲಸದವಳಾಗಿದ್ದ ಪಾರೋ ಅದ್ದೂರಿ ಜೀವನ ನಡೆಸುತ್ತಿರುವುದು ಪೊಲೀಸರಿಗೆ ಕಂಡುಬಂತು. ಆಕೆ ದುಬಾರಿ ಥಾರ್ ಎಸ್‌ಯುವಿ, ರಾಯಲ್ ಎನ್‌ಫೀಲ್ಡ್ ಬೈಕ್ ಚಲಾಯಿಸುವುದು ಮಾತ್ರವಲ್ಲದೆ, ಕಂತೆ ಕಂತೆ ನೋಟುಗಳಿಗೆ ಮುತ್ತು ಕೊಡುತ್ತಾ ಗಾಳಿಯಲ್ಲಿ ಹಣ ಹಾರಿಸುತ್ತಿರುವ ದೃಶ್ಯಗಳು ರೀಲ್ಸ್‌ನಲ್ಲಿ ಪತ್ತೆಯಾಗಿದ್ದವು. ಹೆಚ್ಚಿನ ತನಿಖೆ ನಡೆಸಿದಾಗ, ಈಕೆ ಕೇವಲ ಕೆಲಸದವಳಲ್ಲ, ಬದಲಾಗಿ ಗೌತಮ್ ಕುಮಾರ್ ಅವರ ಹಣಕಾಸಿನ ವಹಿವಾಟುಗಳನ್ನು ನೋಡಿಕೊಳ್ಳುತ್ತಿದ್ದ 'ಬಿನಾ...

ಲಂಚ ಪಡೆಯುತ್ತಾ ರೆಡ್ಹ್ಯಾಂಡ್ ಆಗಿ ಸಿಕ್ಕ ಆಫೀಸರ್; ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ!

Image
  ರಾಯಚೂರು, ಏಪ್ರಿಲ್ 10: ಜಿಲ್ಲೆಯಲ್ಲಿ ಲೋಕಾಯುಕ್ತರು (Lokayukta) ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ ಮಾಡಲು ಲೇಔಟ್ ಮಾಲೀಕ ರಘರಾಮ್ ರೆಡ್ಡಿಯಿಂದ 2 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ಸುರೇಶ್ನನ್ನು ವಶಕ್ಕೆ ಪಡೆಯಲಾಗಿದೆ. ಲೇಔಟ್ ಮಾಲೀಕನಿಂದ ಲೋಕಾಯುಕ್ತಗೆ ದೂರು ಸಿರವಾರ ಪಟ್ಟಣದ ಹೊಸ ಲೇಔಟ್‌ನ 34 ನಿವೇಶನಗಳ ಖಾತಾ ಮ್ಯೂಟೇಶನ್ ಪ್ರಕ್ರಿಯೆಗಾಗಿ ಸುರೇಶ್ ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಘರಾಮ್ ರೆಡ್ಡಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧಾರವಾಗಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಿನ್ನೆ ರಘರಾಮ್ ರೆಡ್ಡಿ ಅವರು 1 ಲಕ್ಷ ರೂ. ಹಣವನ್ನು ಸುರೇಶ್ ಶೆಟ್ಟಿಗೆ ನೀಡುವ ವೇಳೆ ದಾಳಿ ನಡೆಸಿದ್ದಾರೆ. ಸ್ನೇಹಿತನ ಮನೆಯಲ್ಲಿ ಅಡಗಿದ್ದ ಆರೋಪಿ ಬಲೆಗೆ! ಆದರೆ ದಾಳಿ ವೇಳೆ ಸುರೇಶ್ ಶೆಟ್ಟಿ ಕಾರಿನಲ್ಲಿ ಹಣ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಸಿರವಾರದಿಂದ ಕವಿತಾಳ ಕಡೆಗೆ ಕಾರಿನಲ್ಲಿ ತೆರಳಿ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ಲೋಕಾಯುಕ್ತ ತಂಡ ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿ ಕವಿತಾಳ ಪಟ್ಟಣದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡ...

ದಾವಣಗೆರೆ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-SDPI ಕಾರ್ಯಕರ್ತರ ನಡುವೆ ಗಲಾಟೆ

Image
 ದಾವಣಗೆರೆ: ನಗರದ ಮಹಬೂಬ್ ನಗರದ ಮುಖ್ಯ ರಸ್ತೆಯ ಅಲಾ ಹಜರತ್ ಚೌಕದ ಬಳಿ ಗುರುವಾರ ಕಾಂಗ್ರೆಸ್ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ. ಘಟನೆಯ ಹಿನ್ನೆಲೆ: ನಗರದ ವಾರ್ಡ್ ಸಂಖ್ಯೆ 4 ರ ಮಿಲ್ಲತ್ ಶಿಕ್ಷಣ ಸಂಸ್ಥೆಯಲ್ಲಿ ಆರು ಮತಗಟ್ಟೆಗಳಿರುವುದರಿಂದ, ಮತದಾರರಿಗೆ ಅನುಕೂಲ ಮಾಡಿಕೊಡಲು ರಸ್ತೆಯ ಇಕ್ಕೆಲಗಳಲ್ಲಿ ಕಾಂಗ್ರೆಸ್ ಮತ್ತು SDPI ಕಾರ್ಯಕರ್ತರು ಪ್ರತ್ಯೇಕ ಟೇಬಲ್‌ಗಳನ್ನು ಹಾಕಿಕೊಂಡಿದ್ದರು. ಮತದಾನದ ಕೊನೆಯ ಕ್ಷಣದಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಉಭಯ ಪಕ್ಷಗಳ ಕಾರ್ಯಕರ್ತರು ತೀವ್ರ ಪ್ರಯತ್ನ ನಡೆಸುತ್ತಿದ್ದರು. SDPI ಪ್ರಚಾರ: ಕಾರ್ಯಕರ್ತರು ಕುಕ್ಕರ್ ಚಿಹ್ನೆ ಹಾಗೂ 4ನೇ ಸಂಖ್ಯೆಗೆ ಮತ ಹಾಕುವಂತೆ ಮನವಿ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಚಾರ: ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು 3ನೇ ಸಂಖ್ಯೆಯ ಹಸ್ತದ ಗುರುತಿಗೆ ಮತ ನೀಡುವಂತೆ ಕೋರುತ್ತಿದ್ದರು. ಗಲಾಟೆಗೆ ಕಾರಣ: ಮುಖ್ಯ ರಸ್ತೆಯಿಂದ ಹಿಂದೆ ಸರಿಯುವಂತೆ ಮತ್ತು ಟೇಬಲ್ ತೆರವುಗೊಳಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹಾಗೂ ಇತರ ನಾಯಕರು SDPI ಮುಖಂಡರಿಗೆ ತಾಕೀತು ಮಾಡಿದರು. ಇದಕ್ಕೆ SDPI ಕಾರ್ಯಕರ್ತರು ಒಪ್ಪದಿದ್ದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ಹಂತದಲ್ಲಿ ಕಾಂಗ್ರೆಸ್ ಮುಖಂಡರು SDPI ನವರ ಟೇಬಲ್ ಅನ...

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಶಾಂತಿಯುತವಾಗಿ ಮುಕ್ತಾಯಗೊಂಡ ಉಪಚುನಾವಣೆ; ಶೇ. 63ರಷ್ಟು ಮತದಾನ

Image
 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಶಾಂತಿಯುತವಾಗಿ ಮುಕ್ತಾಯಗೊಂಡ ಉಪಚುನಾವಣೆ; ಶೇ. 63ರಷ್ಟು ಮತದಾನ ದಾವಣಗೆರೆ: ಜಿಲ್ಲೆಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಬಹುನಿರೀಕ್ಷಿತ ಉಪಚುನಾವಣೆಯ ಮತದಾನ ಪ್ರಕ್ರಿಯೆಯು ಗುರುವಾರ ಸಂಜೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆಯ ವೇಳೆಗೆ ಕ್ಷೇತ್ರದಲ್ಲಿ ಒಟ್ಟು ಶೇ. 63ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳ ಪ್ರಾಥಮಿಕ ಅಂಕಿಅಂಶಗಳು ತಿಳಿಸಿವೆ. ಮತದಾನದ ವಿವರ: ಕ್ಷೇತ್ರದಲ್ಲಿರುವ ಒಟ್ಟು 2.31 ಲಕ್ಷ ಮತದಾರರ ಪೈಕಿ 1,45,642 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಮತದಾನವು ಮಂದಗತಿಯಲ್ಲಿ ಆರಂಭವಾಯಿತು. ಆದರೆ, ಬೆಳಿಗ್ಗೆ 9 ಗಂಟೆಯ ನಂತರ ಮತದಾನವು ಚುರುಕು ಪಡೆದುಕೊಂಡಿತು. ಮಧ್ಯಾಹ್ನದ ಬಿರು ಬಿಸಿಲಿನ ಕಾರಣ ಮತಗಟ್ಟೆಗಳಲ್ಲಿ ಜನದಟ್ಟಣೆ ಕಡಿಮೆಯಾಗಿದ್ದರೂ, ಸಂಜೆ 4 ಗಂಟೆಯ ನಂತರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತ ಚಲಾಯಿಸಿದರು. ಪ್ರಮುಖ ಅಂಶಗಳು: ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಜನರು ಸಾಲುಗಟ್ಟಿ ನಿಂತು ಸಂಭ್ರಮದಿಂದ ಮತದಾನ ಮಾಡಿದರು. ವಯೋವೃದ್ಧರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಫಲಿತಾಂಶದ ಕುತೂಹಲ: ಈ ಉಪಚುನಾವಣೆಯು ಜಿಲ್ಲೆಯ ರಾಜಕೀಯ ಕಣದಲ್ಲಿ ಭಾರೀ ಕುತೂಹಲ ಮೂಡ...

ಹೊಸಪೇಟೆ: ನಗರಸಭೆ ಎದುರಿನ 20ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳ ತೆರವು

Image
ಹೊಸಪೇಟೆ: ನಗರಸಭೆ ಮುಂಭಾಗದಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ಅತಿಕ್ರಮಣ ಮಾಡಿಕೊಂಡಿದ್ದ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ. ಹಿನ್ನೆಲೆ: ನಗರಸಭೆಯ ಮೂಲಗಳ ಪ್ರಕಾರ, ಈ ಮಳಿಗೆದಾರರು 2016ಕ್ಕೂ ಮೊದಲು ತಿಂಗಳಿಗೆ ಕೇವಲ 535 ರೂಪಾಯಿ ಬಾಡಿಗೆ ಪಾವತಿಸುತ್ತಿದ್ದರು. ಆದರೆ, 2016ರಲ್ಲಿ ಈ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ ನಂತರ, ಇಂದಿನವರೆಗೆ ಯಾವುದೇ ಬಾಡಿಗೆ ಪಾವತಿಯಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯ ವಿವರ: ಬಾಡಿಗೆ ದರ ಅತ್ಯಂತ ಕಡಿಮೆಯಾಗಿದ್ದರಿಂದ ಅದನ್ನು ರದ್ದುಪಡಿಸಲು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಈಗ ನ್ಯಾಯಾಲಯದಿಂದ ನಗರಸಭೆಗೆ ಪೂರಕವಾದ ತೀರ್ಪು ಬಂದ ಹಿನ್ನೆಲೆಯಲ್ಲಿ, ಪೌರಾಯುಕ್ತರಾದ ಶಿವಕುಮಾರ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ.ಮುಂದಿನ ಯೋಜನೆ: ತೆರವುಗೊಳಿಸಲಾದ ಸ್ಥಳವನ್ನು ಈಗ ಸರ್ಕಾರದ ವಶಕ್ಕೆ ಪಡೆಯಲಾಗಿದೆ. "ನಗರಸಭೆಯ ಆಸ್ತಿಗಳ ಸಂರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ" ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ, ನಿಯಮಾನುಸಾರ ಹರಾಜು ಪ್ರಕ್ರಿಯೆಯ ಮೂಲಕ ಮಳಿಗೆಗಳನ್ನು ಹಂಚಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಕಟ್ಟುನಿಟ್ಟಿನ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ವ್ಯಾ...

ಲೋಕಾಯುಕ್ತ ಬಲೆಗೆ ಬಿತ್ತು ಮೀನುಗಾರಿಕೆ ಇಲಾಖೆಯ ದೊಡ್ಡ ತಿಮಿಂಗಲ; ಉಪ ನಿರ್ದೇಶಕ ಶಿವಣ್ಣನ ಮನೇಲಿ ಕೋಟಿ, ಕೋಟಿ ಆಸ್ತಿ!

Image
 ಬಳ್ಳಾರಿಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿದ್ದು, ಬೇನಾಮಿ ಆಸ್ತಿಗಳ ಬಗ್ಗೆಯೂ ತನಿಖೆ ಮುಂದುವರೆದಿದೆ. ಬಳ್ಳಾರಿ (ಏ.07): ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ನಸುಕಿನ ಜಾವವೇ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಆಸ್ತಿ ವಿವರಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಯೊಬ್ಬರು ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣದ ಆಸ್ತಿ ಮಾಡಿದ್ದಾರೆ ಎಂಬುದು ಈಗ ಬಯಲಾಗಿದೆ. ಆಸ್ತಿಯ ವಿವರಗಳು: ಲೋಕಾಯುಕ್ತ ದಾಳಿಯ ವೇಳೆ ಪತ್ತೆಯಾದ ಆಸ್ತಿಗಳ ಪಟ್ಟಿ ಬೆಟ್ಟದಷ್ಟಿದೆ. ಬಳ್ಳಾರಿ ನಗರವೊಂದರಲ್ಲೇ ಶಿವಣ್ಣ ಅವರು ಬರೋಬ್ಬರಿ 14 ಸೈಟುಗಳನ್ನು ಹೊಂದಿದ್ದಾರೆ. ಇದಲ್ಲದೆ ಬಳ್ಳಾರಿ ನಗರದ ವಿವಿಧ ಬಡಾವಣೆಗಳಲ್ಲಿ 3 ಐಷಾರಾಮಿ ಮನೆಗಳು ಪತ್ತೆಯಾಗಿವೆ. ಇನ್ನು ಕೃಷಿ ಭೂಮಿಯ ವಿಷಯಕ್ಕೆ ಬಂದರೆ, ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 44 ಎಕರೆ ಜಮೀನು ಇರುವುದು ದಾಖಲೆಗಳಿಂದ ದೃಢಪಟ್ಟಿದೆ. ಚಿನ್ನ, ನಗದು ಮತ್ತು ಬ್ಯಾಂಕ್ ಬ್ಯ...

ಎಂಎಫ್‌ ಹುಸೇನ್‌ ದಾಖಲೆ ಬ್ರೇಕ್‌ – 163 ಕೋಟಿ ರೂ.ಗೆ ರಾಜಾ ರವಿವರ್ಮ ಚಿತ್ರ ಮಾರಾಟ

Image
 ನವದೆಹಲಿ: ಭಾರತೀಯ ಕಲಾ ಪಿತಾಮಹ ರಾಜಾ ರವಿವರ್ಮ ಅವರ ಯಶೋಧ ಮತ್ತು ಕೃಷ್ಣ ಚಿತ್ರಕಲೆಯನ್ನು ಉದ್ಯಮಿ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಡಾ.ಸೈರಸ್ ಪೂನಾವಾಲಾ  ಅವರು ದಾಖಲೆಯ 163 ಕೋಟಿ ರೂ.ಗೆ ಖರೀದಿಸಿದ್ದಾರೆ. ಸಫ್ರಾನ್ ಆರ್ಟ್  ಸಂಸ್ಥೆ ಆನ್‌ಲೈನ್‌ನಲ್ಲಿ ಆಯೋಜಿಸುವ ಸಫ್ರಾನ್ ಆರ್ಟ್ ಸೇಲ್ ಎಂಬ ಹರಾಜಿನಲ್ಲಿ ಯಶೋಧ ಮತ್ತು ಕೃಷ್ಣ ಚಿತ್ರಕಲೆ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇದೇ ಮೊದಲ ಬಾರಿಗೆ 167.2 ಕೋಟಿ ರೂ. ಮೌಲ್ಯಕ್ಕೆ ಮಾರಾಟವಾದ ಅತ್ಯಂತ ದುಬಾರಿಯ ಚಿತ್ರಕಲೆ ಇದಾಗಿದೆ.  ಕಳೆದ ವರ್ಷ ಎಂ.ಎಫ್. ಹುಸೇನ್ ಅವರ `ಅನ್‌ಟೈಟಲ್ಡ್’ ಚಿತ್ರಕಲೆ 118 ಕೋಟಿ ರೂ.ಗೆ ದೆಹಲಿ ಮೂಲದ ಕಿರಣ್ ನಾಡರ್ ಅವರು ಖರೀದಿಸಿದ್ದರು. ಆ ದಾಖಲೆಯನ್ನು ಮುರಿದು ರಾಜಾ ರವಿವರ್ಮ ಅವರ ಯಶೋಧ ಮತ್ತು ಕೃಷ್ಣ ಚಿತ್ರಕಲೆ ದಾಖಲೆ ಸೃಷ್ಟಿಸಿದೆ. ಖರೀದಿಸಿದ ಬಳಿಕ ಸೈರಸ್ ಪೂನಾವಾಲಾ ಅವರು ಮಾಹಿತಿ ಹಂಚಿಕೊಂಡಿದ್ದು, ಇದನ್ನು ಖರೀದಿಸುವುದು ಹಕ್ಕು ಹಾಗೂ ಒಂದು ಜವಾಬ್ದಾರಿಯೂ ಹೌದು. ಇದು ಕೇವಲಕ್ಕೆ ಚಿತ್ರಕಲೆಯಲ್ಲ. ರಾಷ್ಟ್ರೀಯ ಸಂಪತ್ತು. ಹಾಗಾಗಿ ಸಾರ್ವಜನಿಕ ವೀಕ್ಷಣೆಗೆ ಇದು ಲಭ್ಯವಾಗಬೇಕು. ಜನರಿಗೆ ನೋಡಲು ಸಿಗುವಂತೆ ನನ್ನ ಕೈಲಾದಷ್ಟು ನಾನು ಪ್ರಯತ್ನಿಸುತ್ತೇನೆ ಎಂದಿದ್ದಾರೆ. 1848ರಲ್ಲಿ ತಿರುವಾಂಕೂರು ರಾಜಪ್ರಭುತ್ವದ ಶ್ರೀಮಂತ ಕುಟುಂಬದಲ್ಲಿ ರಾಜ ರವಿವರ್ಮ ಜನಿಸಿದರು. ಯುರೋಪಿಯನ್ ತೈಲವನ್ನು ಬಳಸಿ ವರ್ಣಚಿತ್ರಗಳನ್...

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕ್ ಅಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ!

Image
           ಲಾಕ್ ಅಪ್ ಡೆತ್ ನಲ್ಲಿ ಮೃತಪಟ್ಟ ತಂದೆ-ಮಗ 2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆಯಿಟ್ಟಿದ್ದಾರೆ ಎಂಬ ಆರೋಪದ ಮೇಲೆ. ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆಯಿಟ್ಟಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಅವರನ್ನು ಬಂಧಿಸಲಾಗಿತ್ತು. ನಂತರ ಈ ಆರೋಪ ಸುಳ್ಳು ಎಂದು ಬಹಿರಂಗವಾಯಿತು. ತೂತುಕೂಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಜೆ. ಬೆನಿಕ್ಸ್ ಅವರು ಕಸ್ಟಡಿಯಲ್ಲಿ ಮೃತಪಟ್ಟಿದ್ದರು. ಆರು ವರ್ಷಗಳ ಹಿಂದೆ ನಡೆದಿದ್ದ ಈ ಘಟನೆ ದೇಶವ್ಯಾಪಿ ಆಕ್ರೋಶ ಎಬ್ಬಿಸಿತ್ತು. ಈ ಪ್ರಕರಣವನ್ನು ನ್ಯಾಯಾಲಯ ‘ಅಧಿಕಾರದ ದುರುಪಯೋಗದ ಉದಾಹರಣೆ’ ಎಂದು ಹೇಳಿದೆ. ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಇದ್ದಾರೆ. ಈ ತೀರ್ಪು ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. “ತಂದೆ ಮತ್ತು ಮಗನನ್ನು ಬಟ್ಟೆ ಬಿಚ್ಚಿಸಿ ಕ್ರೂರವಾಗಿ ಹಲ್ಲೆ ಮಾಡಲಾಗಿತ್ತು. ಅದನ್ನು ಓದಿದರೆ ಹೃದಯ ನಡುಗುತ್ತದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. 2020ರ ಜೂನ್ 19ರಂದು ಜಯರಾಜ್ ಮತ್ತು ಬೆನಿಕ್ಸ...

ತಂಬ್ರಹಳ್ಳಿಯಲ್ಲಿ 'ಗುರುಕುಲ ಬೇಸಿಗೆ ಶಿಬಿರ'ಕ್ಕೆ ಚಾಲನೆ: ಶಿಕ್ಷಣ ಪ್ರೇಮಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಂದ ಉದ್ಘಾಟನೆ

Image
 ತಂಬ್ರಹಳ್ಳಿ: ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಮ್ಮಿಕೊಳ್ಳಲಾದ **'ಗುರುಕುಲ ಬೇಸಿಗೆ ಶಿಬಿರ-2026'**ಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಅಕ್ಕಿ ಕೊಟ್ಟಪ್ಪನವರ ಕಾಂಪ್ಲೆಕ್ಸ್‌ನಲ್ಲಿ ನಡೆದ ಈ ಕಾರ್ಯಕ್ರಮವನ್ನು ಶಿಕ್ಷಣ ಪ್ರೇಮಿ ಹಾಗೂ ಮಾಜಿ ಕೃಷಿ ಅಧಿಕಾರಿಗಳಾದ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರು ಉದ್ಘಾಟಿಸಿದರು. ದಿವ್ಯ ಸಾನಿಧ್ಯ: ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಗುರುದೊಡ್ಡ ಬಸವೇಶ್ವರ ಮಠ ನಂದಿಪುರದ ಪರಮ ಪೂಜ್ಯ ಶ್ರೀ ಡಾ. ಮಹೇಶ್ವರ ಮಹಾಸ್ವಾಮಿಗಳು ಹಾಗೂ ಶಾಖಾ ಗವಿಮಠ ಕಡಲಬಾಳಿನ ಪರಮ ಪೂಜ್ಯ ಶ್ರೀ ಮರಿ ಶಾಂತವೀರ ಮಹಾಸ್ವಾಮಿಗಳು ವಹಿಸಿದ್ದರು. ಪೂಜ್ಯರು ಆಶೀರ್ವಚನ ನೀಡಿ, ಬೇಸಿಗೆಯ ಸಮಯದಲ್ಲಿ ವಿದ್ಯಾರ್ಥಿಗಳು ಇಂತಹ ಶಿಬಿರಗಳ ಮೂಲಕ ಜ್ಞಾನಾರ್ಜನೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು. ಮುಖ್ಯ ಅತಿಥಿಗಳು: ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಬಣಕಾರ್ ಕೊಟ್ರೇಶ್, ಪ್ರಥಮ ದರ್ಜೆ ಗುತ್ತಿಗೆದಾರರಾದ ದೇವಿಪ್ರಸಾದ್, ಮುಖಂಡ ಎಸ್. ಮಂಜುನಾಥ್, ಸಹಮತ ವೇದಿಕೆ ಅಧ್ಯಕ್ಷ ರಾಜು, ಬೀದಿಬದಿ ವ್ಯಾಪಾರಸ್ಥರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ. ರೋಶನ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮೈನಹಳ್ಳಿ ಯಂಕರೆಡ್ಡಿ ಉಪಸ್ಥಿತರಿದ್ದರು. ಇವರೊಂದಿಗೆ ಹರಿಣಿ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಟಿ. ಕೊಟ್ರೇಶ್, ಗಡಾದ್ ಬಸವರಾಜ್, ಶಿಕ್ಷಣ ಪ್ರೇಮಿ ನಂದೆಪ್ಪನವರ ಕೃಷ್ಣಾ...

ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಿಲ್ಲ: ಸಚಿವ ಝಮೀರ್ ಅಹ್ಮದ್

Image
 ದಾವಣಗೆರೆ: ನಮ್ಮ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಾಗಲೀ, ಮುನಿಸಾಗಲೀ ಇಲ್ಲ. ಇದೆಲ್ಲವೂ ಮಾಧ್ಯಮದ ಸೃಷ್ಟಿ ಮಾತ್ರ ಎಂದು ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದರು. ನಗರದ ಸಚಿವ ಮಲ್ಲಿಕಾರ್ಜುನ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಲ್ಲಿಕಾರ್ಜುನ್ ಮತ್ತು ನಾವು ಆತ್ಮೀಯ ಸ್ನೇಹಿತರು. ನಾವು ಏಕವಚನದಲ್ಲಿ ಮಾತನಾಡಿಸಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎ. 5 ರಂದು ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಪ್ರಚಾರಕ್ಕೆ ಬಂದ್ದಿದ್ದೇನೆ. ದಾವಣಗೆರೆ ದಕ್ಷಿಣ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಯಾರು ಬಂದರೂ, ಬರದಿದ್ದರೂ ಕಾಂಗ್ರೆಸ್ ಗೆಲ್ಲಲಿದೆ. ಸಮುದಾಯ ಮತ್ತು ಪಕ್ಷದಲ್ಲಿ ಕೆಲವರುಅಸಮಾಧಾನಗೊಂಡಿದ್ದು ಅವರನ್ನು ಮಾತನಾಡಿಸಿ ಸಮಾಧಾನ ಪಡಿಸಿ ಕೆಲಸ ಮಾಡುವಂತೆ ತಿಳಿಸುತ್ತೇನೆ ಎಂದು ಹೇಳಿದರು. ಪಕ್ಷದ ಸಂಪ್ರದಾಯದಂತೆ ಅನುಕಂಪದ ಹಿನ್ನಲೆಯಲ್ಲಿ ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಖಾಸಗಿ ಸಮಾರಂಭಕ್ಕೆಂದು ನಗರಕ್ಕೆ ಬಂದಾಗ ಆಹಿಂದ ಸಮಾಜದವರು ಮುಖ್ಯವಾಗಿ ಮುಸ್ಲಿಂ ಸಮಾಜದ ಮುಖಂಡರು ನನ್ನನ್ನು ದಾವಣಗೆರೆ ದಕ್ಷಿಣದ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಿಸುವಂತೆ ಕೇಳಿದ್ದರು. ಈ ಹಿನ್ನಲೆಯಲ್ಲಿ ನಾವು ಹೈಕಮಾಂಡಗೆ ಟಿಕೆಟ್‍ಗಾಗಿ ಬೇಡಿಕೆ ಇಟ್ಟಿದ್ದವು. ಅದರೆ, ಟಿಕೆಟ್ ಕೊಡುವುದು ಹೈಕಮಾಂಡ್ ನಿರ...

ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ!

Image
 ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ! ಸುದ್ಧಿ ವಿವರ: ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ 'ಭಾರತ ಗೌರವ ರತ್ನ ಶ್ರೀ ಸಮ್ಮಾನ್ ಅವಾರ್ಡ್ ಕೌನ್ಸಿಲ್' ಸಮಾರಂಭದಲ್ಲಿ, ಡಾ. ತಿಪ್ಪೇಸ್ವಾಮಿ ವೆಂಕಟೇಶ್ ವಿ.ಟಿ.ಎಸ್ (B.Sc Agri, MBA, PGDAEM) ಅವರಿಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಸಮಾಜ ಸೇವೆಯಲ್ಲಿನ ಅವರ ಅಪಾರ ಕೊಡುಗೆ ಮತ್ತು ಮಾನವ ಹಕ್ಕುಗಳ ರಕ್ಷಣೆಯಲ್ಲಿ ಅವರು ತೋರುತ್ತಿರುವ ಬದ್ಧತೆಯನ್ನು ಗುರುತಿಸಿ ಈ ಉನ್ನತ ಗೌರವವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಡಾ. ತಿಪ್ಪೇಸ್ವಾಮಿ ಅವರ ಸಾಧನೆಯನ್ನು ಶ್ಲಾಘಿಸಿದರು.

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Image
 ದಾವಣಗೆರೆ: ನಗರದಲ್ಲಿ (Davanagere) ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ  ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

Image
 ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾ ಅವರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಾಗಿ ವೇದಿಕೆ ಮೇಲೆ ಕುಸಿದುಬೀಳುತ್ತಿದ್ದಂತೆಯೇ ಕೂಡಲೇ ಸಂತೋಷ ಹೆಗ್ಡೆಯವರನ್ನು ಸ್ವತ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಸಂತೋಷ್ ಹೆಗ್ಡೆಗೆ ಚಿಕಿತ್ಸೆ ಮುಂದುವರೆದಿದ್ದ, ಸದ್ಯ ಚೇರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಾಣಿಗಳೇ ಗುಣದಲ್ಲಿ ಮೇಲು ಎಂಬುದು ಮತ್ತೊಮ್ಮೆ ಮಂಗ ಸಾಬೀತು ಪಡಿಸಿದೆ.

  ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದ  ವೃದ್ಧೆ ಪಾರ್ವತಮ್ಮ(80) ಎಂಬುವವರ ಸಾವಿಗೆ ಮರುಗಿದ ಕಪಿರಾಯ. ತಮ್ಮ ಮನೆ ಬಳಿ ಬರುತ್ತಿದ್ದ ಕೋತಿಯನ್ನು ತಿಂಡಿ ಕೊಟ್ಟು ನೋಡಿಕೊಂಡಿದ್ದರು. ವಯೋಸಹಜ ಸಾವಿನ ಹಿನ್ನೆಲೆಯಲ್ಲಿ ಅವರು ಮೃತಪಟ್ಟರು. ಈ ಹಿನ್ನೆಲೆ ಮೃತದೇಹದ ಮುಂದೆ ಕೋತಿಯ ಮೂಕರೋಧನೆ ಕಣ್ಣಿನಲ್ಲಿ ನೀರು ತರಿಸುವಂತಿತ್ತು.