ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ದಾವಣಗೆರೆ: ನಗರದಲ್ಲಿ (Davanagere) ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Comments
Post a Comment