ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ!
ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ!
ಸುದ್ಧಿ ವಿವರ:
ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ 'ಭಾರತ ಗೌರವ ರತ್ನ ಶ್ರೀ ಸಮ್ಮಾನ್ ಅವಾರ್ಡ್ ಕೌನ್ಸಿಲ್' ಸಮಾರಂಭದಲ್ಲಿ, ಡಾ. ತಿಪ್ಪೇಸ್ವಾಮಿ ವೆಂಕಟೇಶ್ ವಿ.ಟಿ.ಎಸ್ (B.Sc Agri, MBA, PGDAEM) ಅವರಿಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಸಮಾಜ ಸೇವೆಯಲ್ಲಿನ ಅವರ ಅಪಾರ ಕೊಡುಗೆ ಮತ್ತು ಮಾನವ ಹಕ್ಕುಗಳ ರಕ್ಷಣೆಯಲ್ಲಿ ಅವರು ತೋರುತ್ತಿರುವ ಬದ್ಧತೆಯನ್ನು ಗುರುತಿಸಿ ಈ ಉನ್ನತ ಗೌರವವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಡಾ. ತಿಪ್ಪೇಸ್ವಾಮಿ ಅವರ ಸಾಧನೆಯನ್ನು ಶ್ಲಾಘಿಸಿದರು.

Comments
Post a Comment