ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು


 ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ತುಮಕೂರು: ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಬೇಸತ್ತ ಗಂಡನೋರ್ವ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು.. ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಂಡನ ಅಕ್ಕನ ಮಗನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ತಿಳಿದುಬಂದಿದೆ. ಅಲ್ಲದೇ ಮನೆಯಲ್ಲಿದ್ದ ಬರೋಬ್ಬರಿ 130 ಗ್ರಾಂ ಚಿನ್ನವನ್ನು ಸಹ ಹೊತ್ತು ಪರಾರಿಯಾಗಿರುವುದು ಕೂಡ ಬೆಳಕಿಗೆ ಬಂದಿದೆ.

ಆಲ್ಕೆರೆ ಗ್ರಾಮದ ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಸಾವಿಗೂ ಮುನ್ನ ಆತ ತನ್ನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಎಂಬುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.


ಶಿವಣ್ಣ ಪತ್ನಿ ಕಾವ್ಯಾ (35) ಬೇರೊಬ್ಬರ ಜತೆಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಕೆಲ ದಿನಗಳಿಂದ ಕಾವ್ಯಾ ಕೊತ್ತಗೆರೆ ಹೋಬಳಿಯ ಕುರುಡಿಹಳ್ಳಿಯ ತವರು ಮನೆಗೆ ಹೋಗಿದ್ದರು. ಶುಕ್ರವಾರ ಸಂಜೆ ಶಿವಣ್ಣ ಇಬ್ಬರು ಮಕ್ಕಳನ್ನು ವಾಪಸ್ ಆಲ್ಕೆರೆಗೆ ಕರೆದುಕೊಂಡು ಬಂದಿದ್ದರು. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!