ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!


 ದಶಕದ ಆಡಳಿತಕ್ಕೆ ಬಿತ್ತು ಬ್ರೇಕ್:– ಎಡರಂಗದ ಭದ್ರಕೋಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ!

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ (Kerala Vidhanasabha Election) ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ (Congress) ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ದಾಖಲಿಸಿದೆ. ಪಿಣರಾಯಿ ವಿಜಯನ್ (Pinarayi Vijayan) ನೇತೃತ್ವದ ಎಲ್‌ಡಿಎಫ್‌ (LDF) ಆಡಳಿತಕ್ಕೆ ಅಂತ್ಯ ಹಾಡಿರುವ ಯುಡಿಎಫ್‌ 10 ವರ್ಷದ ಬಳಿಕ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.


ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್‌ ಸುಮಾರು 104 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಸ್ಪಷ್ಟ ಬಹುಮತ ಪಡೆದಿದೆ. 10 ವರ್ಷಗಳ ಎಲ್‌ಡಿಎಫ್‌ ಆಡಳಿತದ ನಂತರ ಕೇರಳದ ಜನರು ಈ ಬಾರಿ ಬದಲಾವಣೆಗೆ ಮತ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಅವರು ಪುತುಪಳ್ಳಿಯಲ್ಲಿ ಸುಮಾರು 52,907 ಮತಗಳ ಬೃಹತ್ ಅಂತರದಿಂದ ಜಯಗಳಿಸಿದ್ದಾರೆ. ಹರಿಪಾಡ್ ಕ್ಷೇತ್ರದಲ್ಲಿ ರಮೇಶ್ ಚೆನ್ನಿತ್ತಲ 23,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುಸ್ಲಿಂ ಲೀಗ್ ತಾನು ಸ್ಪರ್ಧಿಸಿದ್ದ 27 ಸ್ಥಾನಗಳಲ್ಲಿ 23ರಲ್ಲಿ ಮುನ್ನಡೆ ಸಾಧಿಸಿ ಯುಡಿ.ಫ್‌ ಗೆಲುವಿಗೆ ಬಲ ತುಂಬಿದೆ.


ಎಲ್‌ಡಿಎಫ್‌ಗೆ ಹಿನ್ನಡೆ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನೇತೃತ್ವದ ಎಡರಂಗ ಮೈತ್ರಿಕೂಟಕ್ಕೆ ಆಡಳಿತ ವಿರೋಧಿ ಅಲೆ ತೀವ್ರವಾಗಿ ತಟ್ಟಿದೆ. ಪ್ರಮುಖವಾಗಿ ಯುವಜನರಿಗೆ ಉದ್ಯೋಗಾವಕಾಶಗಳ ಕೊರತೆ ಮತ್ತು ಕೇರಳ ಕಾಂಗ್ರೆಸ್ (M) ನಾಯಕ ಜೋಸ್ ಕೆ. ಮಾಣಿ ಅವರಂತಹ ಹಿರಿಯ ನಾಯಕರ ಸೋಲು ಎಲ್‌ಡಿಎಫ್‌ಗೆ ಭಾರೀ ಆಘಾತ ನೀಡಿದೆ.

ಕೇರಳದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಬದಲಾಗುವ ಸಂಪ್ರದಾಯವನ್ನು ಈ ಫಲಿತಾಂಶ ಮತ್ತೆ ನೆನಪಿಸಿದೆ. ಕಾಂಗ್ರೆಸ್ ಮೈತ್ರಿಕೂಟದ ಸಂಘಟಿತ ಹೋರಾಟ ಮತ್ತು ಜನಕಲ್ಯಾಣ ಯೋಜನೆಗಳ ಭರವಸೆಗಳು ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಯುಡಿಎಫ್‌ ಕೇಂದ್ರ ಕಚೇರಿಗಳಲ್ಲಿ ಈಗ ವಿಜಯೋತ್ಸವದ ಸಂಭ್ರಮ ಮನೆಮಾಡಿದೆ.

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ