Posts

Showing posts from July, 2026

11 ತಿಂಗಳ ಕಂದಮ್ಮ ಸಾವು; ಅವಧಿ ಮೀರಿದ ಔಷಧ ನೀಡಿದ ಆರೋಪದಡಿ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ..!

Image
 ದಾವಣಗೆರೆ: ದಾವಣಗೆರೆ ಜಿಲ್ಲೆಯ Honnali (ಹೊನ್ನಾಳಿ) ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ 11 ತಿಂಗಳ ಹೆಣ್ಣು ಮಗು ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಗುವಿಗೆ ಅವಧಿ ಮುಗಿದ ಔಷಧ ನೀಡಿದ ಪರಿಣಾಮವೇ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತ ಮಗುವನ್ನು ಹನುಮನಹಳ್ಳಿ ಗ್ರಾಮದ ವಸುಂಧರ ಹಾಗೂ ಲೋಕೇಶ್ ದಂಪತಿಯ 11 ತಿಂಗಳ ಪುತ್ರಿ ಪೂರ್ವಿಕ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಗುವನ್ನು ಹೊನ್ನಾಳಿ ಸಮೀಪದ ಸಾಸ್ವೆಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ವೈದ್ಯರು ನೀಡಿದ ಔಷಧವನ್ನು ಹಾಕಿದ ತಕ್ಷಣ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧವನ್ನು ಬಳಸಲಾಗಿದೆ ಎಂಬ ಗಂಭೀರ ಆರೋಪವನ್ನು ಪೋಷಕರು ಮಾಡಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪುತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ನಂತರ ಸಾವಿನ ನಿಖರ ಕಾರಣ ಬಹಿರಂಗವಾಗುವ ನಿರೀಕ್ಷೆಯಿದೆ.

ಶೀರ್ಷಿಕೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" – ದಾವಣಗೆರೆಯಲ್ಲಿ SIR ಮತದಾರರ ಜಾಗೃತಿ ಅಭಿಯಾನ ಯಶಸ್ವಿ!

Image
 ದಾವಣಗೆರೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" ಹಾಗೂ "ನನ್ನ ಮತ - ನನ್ನ ಹಕ್ಕು" ಎಂಬ ಸದುದ್ದೇಶದೊಂದಿಗೆ ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ SIR (ಮತದಾರರ ಜಾಗೃತಿ) ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮತ್ತು ಮತದಾನದ ಮಹತ್ವವನ್ನು ಅರಿಯಬೇಕು ಎಂಬ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ನೇತೃತ್ವ ಹಾಗೂ ಗಣ್ಯರ ಉಪಸ್ಥಿತಿ: ಈ ಬೃಹತ್ ಜಾಗೃತಿ ಅಭಿಯಾನಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಮಹಾತೇಶ್ ಅವರು ನೇತೃತ್ವ ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ AERo ಪ್ರಭು ಸರ್ ಹಾಗೂ ರಶ್ಮಿ ಮೇಡಂ ಅವರು ವಿಶೇಷವಾಗಿ ಉಪಸ್ಥಿತರಿದ್ದು, ಅಭಿಯಾನದ ಯಶಸ್ಸಿಗೆ ಮಾರ್ಗದರ್ಶನ ನೀಡಿದರು. ಕ್ಷೇತ್ರ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮ: ಕ್ಷೇತ್ರ ಮಟ್ಟದಲ್ಲಿ ಸಾರ್ವಜನಿಕರನ್ನು ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿರುವ BLA ಹಾಗೂ BLO ಗಳ ತಂಡವು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿತು. ಪ್ರಮುಖರಾದ ಟಿ. ಹುಚ್ಚಪ್ಪ ಸರ್ (T. Huchappa Sir) ಹಾಗೂ ಎಲ್ಲಾ BLO ಗಳು ಒಟ್ಟಾಗಿ ಸೇರಿಕೊಂಡು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸ...

ಜಂತರ್ ಮಂತರ್‌ನಲ್ಲಿ ಆಹಾರ ನೀಡುತ್ತಿದ್ದ ಜುನೇದ್ ಮನೆ ಮೇಲೆ ಯುಪಿ ಪೊಲೀಸ್ ದಾಳಿ: CJP ಆಕ್ರೋಶ

Image
 ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಜನರಿಗೆ ಆಹಾರ ಮತ್ತು ಕುಡಿಯುವ ನೀರು ಪೂರೈಸುತ್ತಿದ್ದ ಸಾಮಾಜಿಕ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಕುಟುಂಬಸ್ಥರ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಳಿ ನಡೆಸಿ, ಕಿರುಕುಳ ನೀಡುತ್ತಿದ್ದಾರೆ ಎಂದು ಕಾಕ್ರೋಜ್‌ ಜನತಾ ಪಾರ್ಟಿ ಗಂಭೀರ ಆರೋಪ ಮಾಡಿದೆ. ಅಪರಾಧಿಗಳನ್ನ ಬಂಧಿಸುವ ಬದಲು, ಸಮಾಜಸೇವೆ ಮಾಡುತ್ತಿರುವ ಸ್ವಯಂಸೇವಕರನ್ನ ಹಾಗೂ ಅವರ ಕುಟುಂಬದವರ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಟ್ವಿಟರ್) ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಿಜೆಪಿ, 'ಉತ್ತರ ಪ್ರದೇಶ ಪೊಲೀಸರು ಕ್ರಿಮಿನಲ್‌ಗಳನ್ನ ಹಿಡಿಯುವ ಬದಲು, ಜಂತರ್ ಮಂತರ್‌ನಲ್ಲಿ ಜನರಿಗೆ ಉಚಿತವಾಗಿ ಆಹಾರ ಮತ್ತು ನೀರು ವಿತರಿಸುತ್ತಿದ್ದ ನಮ್ಮ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಹಿಂದೆ ಬಿದ್ದು ಸಮಯ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜುನೇದ್ ಅವರ ಕುಟುಂಬಕ್ಕೆ ಪೊಲೀಸರು ತೀವ್ರ ಕಿರುಕುಳ ನೀಡುತ್ತಿದ್ದು, ಈ ಸಮಯದಲ್ಲಿ ನಾವು ಅವರ ಜೊತೆಗೆ ನಿಲ್ಲುತ್ತೇವೆ' ಎಂದು ಸ್ಪಷ್ಟಪಡಿಸಿದೆ. ಮಾಹಿತಿಗಳ ಪ್ರಕಾರ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಧರಣಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಜನರಿಗೆ ಮೊಹಮ್ಮದ್ ಜುನೇದ್ ಪ್ರತಿ ದಿನ ಉಚಿತ ಆಹಾರ ಮತ್ತು ನೀರು ಪೂರೈಸುವ ಕೆಲಸ ಮಾಡುತ್ತ...

ನೀಟ್ ವಿಚಾರಕ್ಕೆ ಸುಪ್ರೀಂ ಕೋರ್ಟ್‌ ಎಂಟ್ರಿ! ಕೇಂದ್ರ ಸರ್ಕಾರಕ್ಕೆ ಚಾಟಿ - ಗಮನಿಸುತ್ತಿದ್ದೇವೆ, ಇದೇ ರೀತಿ ಮುಂದುವರಿಯಲು ಬಿಡಲಾಗದು

Image
 ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ಆನ್‌ಲೈನ್ ಪರೀಕ್ಷಾ ವ್ಯವಸ್ಥೆಯತ್ತ ಗಮನಹರಿಸಲು ಸೂಚಿಸಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ. ಈ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಹೊಸದಿಲ್ಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಲೋಪದೋಷಗಳ ಸರಣಿಗೆ ತಕ್ಷಣವೇ ಬ್ರೇಕ್ ಹಾಕುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವ್ಯವಸ್ಥೆಯತ್ತ ಕೊಂಡೊಯ್ಯುವ ಬಗ್ಗೆ ಸರ್ಕಾರದ ಯೋಜನೆಗಳೇನು ಎಂಬುದರ ಕುರಿತು ವರದಿ ನೀಡುವಂತೆ ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ವಿಭಾಗೀಯ ಪೀಠವು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಪೀಠವು, "ಈ ಪರಿಸ್ಥಿತಿ ಹೀಗೆಯೇ ಮುಂದುವರಿಯಲು ನಾವು ಬಿಡುವುದಿಲ್ಲ. ಈ ಪ್ರಕರಣದ ಪ್ರತಿಯೊಂದು ಬೆಳವಣಿಗೆಯನ್ನು ನಾ...

ನ್ಯಾಯಕ್ಕಾಗಿ ಸಮಾಧಿ ಅಗೆದು ತಾಯಿಯ ಕೊಳೆತ ಶವವನ್ನೇ ಬೈಕ್ನಲ್ಲಿ ತಂದ ಮಕ್ಕಳು: ಬೆಚ್ಚಿಬಿದ್ದ ದಾವಣಗೆರೆ!

Image
 ದಾವಣಗೆರೆ: ಮೂರು ತಿಂಗಳ ಹಿಂದೆ ಹತ್ಯೆಯಾಗಿದ್ದ ತಮ್ಮ ತಾಯಿಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದ ಮಕ್ಕಳು, ಹೂತಿಟ್ಟಿದ್ದ ತಾಯಿಯ ಕೊಳೆತ ಶವವನ್ನು ಸಮಾಧಿಯಿಂದ ಹೊರತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಬೈಕ್ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ತಮ್ಮ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿರುವ ಮಕ್ಕಳು, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ನ್ಯಾಯಕ್ಕಾಗಿ ಆಗ್ರಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸುವಂತಹ ಕೆಲಸ ಮಾಡಿದ್ದಾರೆ. ಮೂರು ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಿದ್ದ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದು ಬೈಕ್‌ನಲ್ಲಿ ಹೊತ್ತುಕೊಂಡು ಜಿಲ್ಲಾಸ್ಪತ್ರೆಗೆ ಬಂದಿರುವ ಘೋರ ಘಟನೆ ನಡೆದಿದೆ. ಆದಾಪುರ ಗ್ರಾಮದ ಈರಮ್ಮ ಎಂಬುವವರು ಏಪ್ರಿಲ್ 29ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ವೈದ್ಯರು ಇದೊಂದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಒಪ್ಪದ ಮಕ್ಕಳು, ತಾಯಿಯ ಸಾವಿಗೆ ಅಕ್ಕಪಕ್ಕದ ಮನೆಯವರೇ ಕಾರಣ ಎಂದು ಮಗ ಮಂಜುನಾಥ್ ಆರೋಪಿಸಿದ್ದರು. ಈ ಸಂಬಂಧ 11 ಜನರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಲೆಬೆನ್ನೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂ...

BREAKING : 20 ದಿನಗಳ ಉಪವಾಸ ಅಂತ್ಯ ! ಜಂತರ್ ಮಂತರ್‌ನಿಂದ ‘ಸೋನಂ ವಾಂಗ್ಚುಕ್’ ಆಸ್ಪತ್ರೆಗೆ ದಾಖಲು |

Image
 ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ ಬೆಳಗಿನ ಜಾವ ಜಂತರ್ ಮಂತರ್‌ಗೆ ಬಂದ ಪೊಲೀಸರು, ಪ್ರತಿಭಟನಾಕಾರರ ಘೋಷಣೆ ಹಾಗೂ ವಿರೋಧದ ನಡುವೆ ವಾಂಗ್ಚುಕ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ದೆಹಲಿ ಪೊಲೀಸರು ಪ್ರಕಟಣೆ ಹೊರಡಿಸಿ, ದೆಹಲಿ ಹೈಕೋರ್ಟ್‌ನ ಆದೇಶ ಮತ್ತು ವೈದ್ಯಕೀಯ ತಜ್ಞರ ಸಲಹೆಯಂತೆ, ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಕಾರಣ ಅವರನ್ನು ಅಗತ್ಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ಇರುವ ಪ್ರತಿಭಟನಾಕಾರರು ಶಾಂತಿಯುತವಾಗಿ ಸ್ಥಳವನ್ನು ಖಾಲಿ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪೊಲೀಸರ ಪ್ರಕಾರ, ಹೈಕೋರ್ಟ್ ಆದೇಶ ಜಾರಿಗೊಳಿಸುವ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದು, ಸ್ವಲ್ಪ ಗೊಂದಲ ಉಂಟಾಯಿತು. ಆದರೆ ಪೊಲೀಸರು ಅತ್ಯಂತ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಿ ಕಾರ್ಯಾಚರಣೆಯನ್ನು ಸುರಕ್ಷಿತವಾಗಿ ಪೂರ್ಣಗೊಳಿಸಿದರು...

ರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ - ಗೋವಿಂದ ದೇವ್ ಗಿರಿ

Image
 ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ. ಅಯೋಧ್ಯೆ: ರಾಮ ಮಂದಿರದ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದು, ಖಜಾಂಚಿ ಗೋವಿಂದ ದೇವ್ ಗಿರಿ ಮಹಾರಾಜ್ ಅವರೂ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟವರೆಲ್ಲರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಗಳಾಗಿದ್ದು, ಬ್ಯಾಂಕ್ ಅಧಿಕಾರಿಗಳು ಅವರ ಅರ್ಹತೆಗಳನ್ನು ಪರಿಶೀಲಿಸಬೇಕಾಗಿತ್ತು ಮತ್ತು ಹೆಚ್ಚು ಜಾಗರೂಕರಾಗಿರಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Image
 ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್ (Gym Trainer) ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಖಾಸಗಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹಿಂದೂ ಸಂಘಟನೆಗಳ ಮುಖಂಡರು ಹೊರಹಾಕಿದ್ದಾರೆ. ಈ ಕೃತ್ಯದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿವೆ ಎನ್ನಲಾಗಿದ್ದು, ಕೆಲ ಫೋಟೋಗಳು ಸಹ ವೈರಲ್ ಆಗಿವೆ. ಬ್ಲ್ಯಾಕ್‌ಮೇಲ್‌ಗೆ ಹೆದರಿ ಪ್ರತಿಷ್ಠಿತ ಕುಟುಂಬದ ಮಹಿಳೆಯೋರ್ವರು ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಿಮ್ ಟ್ರೇನರ್ ಇಸ್ಮಾಯಿಲ್‌ನನ್ನು ಗಡಿಪಾರು ಮಾಡುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ನಿಮ್ಮ ಮೇಲೂ ಕ್ರಮ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂ ಮುಖಂಡರಿಗೆ ...

ಎಸ್ ಜಾನಕಿ ಇನ್ನಿಲ್ಲ: ಮೈಸೂರಿನಲ್ಲಿ ಗಾಯನ ನಿಲ್ಲಿಸಿದ ದಕ್ಷಿಣ ಭಾರತದ ಗಾನ ಕೋಗಿಲೆ!

Image
 ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ತನ್ನ ಗಾಯನ ನಿಲ್ಲಿಸಿದೆ. ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು. ಬಳಿಕ ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

ಕೊಟ್ಟೂರಿನ ಹಿರಿಯ ನಾಯಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ನಿಧನ

Image
 ಕೊಟ್ಟೂರು: ಕೊಟ್ಟೂರಿನ ಹಮ್ಮೆಯ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಉಜ್ಜಯಿನಿ ಪೀಠದ ಕಾರ್ಯದರ್ಶಿಯಾಗಿದ್ದ ಶ್ರೀ ಎಂ.ಎಂ.ಜೆ. ಹರ್ಷವರ್ಧನ್ ಅವರು ಇಂದು ನಿಧನರಾಗಿದ್ದಾರೆ. ಸಮಾಜ ಸೇವೆಯಲ್ಲಿ ಸಕ್ರಿಯ: ದಿವಂಗತ ಎಂ.ಎಂ.ಜೆ. ಹರ್ಷವರ್ಧನ್ ಅವರು ತಮ್ಮ ಸಮಾಜ ಸೇವೆ, ಧಾರ್ಮಿಕ ಕಾರ್ಯಗಳು ಹಾಗೂ ಜನಪರ ಕಾಳಜಿಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ನೆನಪನ್ನು ಉಳಿಸಿದ್ದಾರೆ. ಅವರ ಅಗಲಿಕೆಯಿಂದ ಕೊಟ್ಟೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಗಣ್ಯರ ಸಂತಾಪ: ಅವರ ನಿಧನಕ್ಕೆ ಅಪಾರ ಅಭಿಮಾನಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಓಂ ಶಾಂತಿ. ಮುಖ್ಯ ವರದಿಗಾರರು : ಸಿ ಜಿ  ವಸಂತ್ ಕುಮಾರ್ ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್ವರ್ಕ್ 

ದಾವಣಗೆರೆಯಲ್ಲಿ ಗಗನಚುಂಬಿ ಕಟ್ಟಡಕ್ಕೆ ಅನುಮತಿ; ದೂಡಾ ಹೊಸ ಲೇಔಟ್‌ಗಳ ನಿರ್ಮಾಣಕ್ಕೆ ಯತೀಂದ್ರ ಸಿದ್ದರಾಮಯ್ಯ ಸೂಚನೆ

Image
 ದಾವಣಗೆರೆ ನಗರದಲ್ಲಿ ಹೈರೈಸ್ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಟೈರ್-2 ನಗರಗಳನ್ನು ಅಭಿವೃದ್ಧಿಪಡಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಎಫ್‌ಎಆರ್‌ ಹೆಚ್ಚಳದಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದರು. ಅಲ್ಲದೆ, ಕುಂದುವಾಡದಲ್ಲಿ ರೈತರ ವಿರೋಧವಿದ್ದಲ್ಲಿ ಬಡಾವಣೆ ನಿರ್ಮಿಸದೆ, ಬಾತಿಯಂತಹ ಲೇಔಟ್‌ಗೆ ಸಿದ್ಧವಿರುವ ಕಡೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮತ್ತು ಕುಡಿಯುವ ನೀರು, ಇ-ಸ್ವತ್ತು ಸೇವೆಗಳಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ದಾವಣಗೆರೆ: ದಾವಣಗೆರೆ ನಗರದ ವ್ಯಾಪ್ತಿಯಲ್ಲಿ ಹೈರೈಸ್‌ ಬಿಲ್ಡಿಂಗ್‌ಗಳ (ಗಗನಚುಂಬಿ ಕಟ್ಟಡ) ನಿರ್ಮಾಣಕ್ಕೆ ಅನುಮತಿ ನೀಡಿ, ಇದರಿಂದ ದಾವಣಗೆರೆ ರೀತಿಯ ಎರಡನೇ ಹಂತದ ನಗರಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ,'' ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು. ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ನಡೆದ ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ''ಎರಡನೇ ಹಂತದ ನಗರಗಳು (ಟೈರ್‌-2 ಸಿಟಿ) ತ್ವರಿತವಾಗಿ ಅಭಿವೃದ್ಧಿ ಸಾಧಿಸಬೇಕೆಂದರೆ ಇಲ್ಲಿದೊಡ್ಡ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವುದು ಅನಿವಾರ್ಯ'' ಎಂದರು. ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಪೂರಕವಾಗಿ ಫ್ಲೋರ್‌ ಏರಿಯಾ ರೇಷಿ...

BREAKING : ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ; ಹಿಂದೂ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್.!

Image
 ಬೆಂಗಳೂರು: ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೌಲ್ವಿಗಳಿಗೆ ನಿಂದಿಸಿದ ಆರೋಪದ ಮೇರೆಗೆ ಅಬ್ದುಲ್ ರಜಾಕ್ ಎಂಬುವವರು ದೂರು ನೀಡಿದ್ದರು.ದೂರಿನಲ್ಲಿ, ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಹೇಳಿಕೆಗಳ ಮೂಲಕ ಮೌಲ್ವಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ