BREAKING : ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ; ಹಿಂದೂ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್.!
ಬೆಂಗಳೂರು: ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೌಲ್ವಿಗಳಿಗೆ ನಿಂದಿಸಿದ ಆರೋಪದ ಮೇರೆಗೆ ಅಬ್ದುಲ್ ರಜಾಕ್ ಎಂಬುವವರು ದೂರು ನೀಡಿದ್ದರು.ದೂರಿನಲ್ಲಿ, ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಹೇಳಿಕೆಗಳ ಮೂಲಕ ಮೌಲ್ವಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Comments
Post a Comment