Posts

Showing posts from August, 2026

20 ಸಚಿವರ ಡಿಕೆಶಿ ಸಂಪುಟ: ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?

Image
 ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಮುಖ್ಯಮಂತ್ರಿ ಸೇರಿ ಸಂಪುಟದ ಒಟ್ಟು ಸದಸ್ಯರ ಸಂಖ್ಯೆ ಗರಿಷ್ಠ ಮಿತಿ 33ಕ್ಕೆ ತಲುಪಿದೆ. ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಸಮೀಕರಣವನ್ನು ಗಮನದಲ್ಲಿಟ್ಟುಕೊಂಡು ಹೊಸ ಸಂಪುಟವನ್ನು ರಚಿಸಲಾಗಿದೆ. ನೂತನ ಸಂಪುಟದ ಜಾತಿ ಪ್ರಾತಿನಿಧ್ಯದ ವಿವರ ಇಲ್ಲಿದೆ. ಸಂಪುಟದಲ್ಲಿ ಲಿಂಗಾಯತ ಹಾಗೂ ಪರಿಶಿಷ್ಟ ಜಾತಿ ಸಮುದಾಯಕ್ಕೆ ತಲಾ 7 ಸ್ಥಾನ ಸಿಕ್ಕಿದ್ದರೆ, ಒಕ್ಕಲಿಗ ಮತ್ತು ಹಿಂದುಳಿದ ವರ್ಗಕ್ಕೆ ತಲಾ 5 ಹಾಗೂ 7 ಸ್ಥಾನ ನೀಡಲಾಗಿದೆ. ಉಳಿದಂತೆ ಅಲ್ಪಸಂಖ್ಯಾತರಿಗೆ 4, ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಜಾತಿವಾರು ಸಚಿವರ ವಿವರ ಲಿಂಗಾಯತ ಸಮುದಾಯ ಎಂ. ಬಿ. ಪಾಟೀಲ್ ಈಶ್ವರ್ ಖಂಡ್ರೆ ಬಸವರಾಜ್ ರಾಯರೆಡ್ಡಿ ವಿಜಯಾನಂದ ಕಾಶಪ್ಪನವರ ಲಕ್ಷ್ಮಣ ಸವದಿ ಡಾ. ಶರಣ ಪ್ರಕಾಶ್ ಪಾಟೀಲ್ ಎಸ್. ಎಸ್. ಮಲ್ಲಿಕಾರ್ಜುನ ಒಕ್ಕಲಿಗ ಸಮುದಾಯ ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ) ಕೃಷ್ಣ ಬೈರೇಗೌಡ ಎನ್. ಚೆಲುವರಾಯಸ್ವಾಮಿ ಎಚ್. ಸಿ. ಬಾಲಕೃಷ್ಣ ಕೆ. ಎಂ. ಶಿವಲ...